ಮನೆ ರಾಜ್ಯ ರಾಮನಗರ ಹೆಸರು ಬದಲಾವಣೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ!

ರಾಮನಗರ ಹೆಸರು ಬದಲಾವಣೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ!

0

ಬೆಂಗಳೂರು: ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ ತಕ್ಷಣ, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಮಾಡಿದ ಮಾರ್ಮಿಕ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ.

ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ, “ಅಧಿಕಾರ ಶಾಶ್ವತವಲ್ಲ. ಚಕ್ರ ತಿರುಗುತ್ತಲೇ ಇರುತ್ತದೆ. ಸಮಯ ಸರಿಯಾಗಿಲ್ಲದಿದ್ದರೆ ಏನು ಮಾಡಲಾಗದು. ನೀರು ಇದ್ದಾಗ ಅಷ್ಟೇ ಜಿಗಿಯಬಹುದು” ಎಂಬ ತೀವ್ರ ಮತ್ತು ಅರ್ಥಭರಿತ ಮಾತುಗಳ ಮೂಲಕ ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಉತ್ತರ ಪ್ರದೇಶದಲ್ಲೂ ಅನೇಕ ಊರುಗಳ ಹೆಸರು ಬದಲಾವಣೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲೂ ಹೊಸಪೇಟೆ, ವಿಜಯನಗರ ನಾಮಕರಣ ಮಾಡಲಾಗಿದೆ. ಅದೇ ರೀತಿ ಏನೋ ಉದ್ದೇಶ ಇಟ್ಟುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಈ ರೀತಿ ಮಾಡಿರಬಹುದು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮಾತನಾಡಿದ್ದೇವೆ. ಸಮಯ ನಮ್ಮ ಪರವಾಗಿ ಇಲ್ಲದೆ ಇದ್ದಾಗ ಏನು ಮಾಡಲಾಗದು. ಜಿಗಿಯಬೇಕಾದರೆ ನೀರು ಇರಬೇಕು, ನೀರು ಇದ್ದಾಗ ಜಿಗಿಯಬಹುದು. ಅಲ್ಲಿಯವರೆಗೂ ಕಾಯುತ್ತೇವೆ ಎಂದು ಅವರು ಹೇಳಿದರು.

ಬೆಳಗಾವಿ ರಾಜಕಾರಣದ ವಿಷಯಕ್ಕೆ ಸಂಬಂಧಿಸಿದ ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಮುಸುಕಿನ ಗುದ್ದಾಟ ನಡೆದಿತ್ತು. ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡಿದ್ದರು. ಇದೀಗ ರಾಮನಗರ ಹೆಸರು ಬದಲಾವಣೆ ಸಂದರ್ಭ ಸತೀಶ್ ಮಾರ್ಮಿಕವಾಗಿ ಮಾತನಾಡಿರುವುದು ಕುತೂಹಲ ಸೃಷ್ಟಿಸಿದೆ.