ಮಲೆಂಗಾವ್: ವಿನಾಯಕ ದಾಮೋದರ ವೀರ ಸಾವರ್ಕರ್ ಅವರು ನಮ್ಮ ದೇವರು. ಅವರ ಬಗ್ಗೆ ಅಗೌರವ ತೋರುವುದು ಸಹಿಸಲು ಸಾಧ್ಯವಿಲ್ಲ ಎಂದು ಶಿವಸೇನಾದ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಉದ್ಧವ್ ಠಾಕ್ರೆ ರಾಹುಲ್ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ನಾವು ಹೋರಾಟಕ್ಕೆ ಸಜ್ಜಾಗಿದ್ದೇವೆ. ಆದರೆ ನಮ್ಮ ದೇವರನ್ನು ಅವಮಾನಿಸುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸಾವರ್ಕರ್’ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಅವರು ಹೇಳಿದ್ದಾರೆ.
ವಿ.ಡಿ ಸಾವರ್ಕರ್ ಅವರ ಹಿಂದುತ್ವದ ನಮ್ಮ ಆದರ್ಶವಾಗಿದ್ದು, ಕಾಂಗ್ರೆಸ್ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಅಂಡಮಾನ್’ನ ಸೆಲ್ಲುಲಾರ್ ಜೈಲಿನಲ್ಲಿ 14 ವರ್ಷಗಳ ಕಾಲ ಸಾವರ್ಕರ್ ಅವರು, ಊಹಿಸಲಾಗದ ಚಿತ್ರಹಿಂಸೆ ಅನುಭವಿಸಿದರು. ಅದು ಅವರ ತ್ಯಾಗದ ಒಂದು ರೂಪ. ನಾವು ಅವರ ಕಷ್ಟಗಳನ್ನು ಓದಲು ಮಾತ್ರ ಸಾಧ್ಯ. ಸಾವರ್ಕರ್ ಅವರನ್ನು ಅವಮಾನಿಸುವುದು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಒಂದು ವೇಳೆ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು ಅವಮಾನಿಸುವುದನ್ನು ಮುಂದುವರಿಸಿದರೆ, ವಿಪಕ್ಷಗಳ ಐಕ್ಯತೆಯಲ್ಲಿ ಬಿರುಕು ಉಂಟಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ. ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಗೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.