ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಹಾಗೂ ಅವರ ಸಂಸ್ಕೃತಿಯನ್ನು ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ಚಲನಚಿತ್ರ ನಟ ಕಾರ್ತಿಕ್ ಮಹೇಶ್ ಹೇಳಿದರು.
ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ‘ಜೆಎಸ್ಎಸ್ ಕಲಾಮಂಟಪ’ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ಜೆಎಸ್ಎಸ್ ರಂಗೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.
8 ಕೆ.ಜಿ ತೂಕವಿರುವ ಡೊಳ್ಳು ಹೊತ್ತು ದಿನವಿಡೀ ಪ್ರದರ್ಶನ ನೀಡುವ ಕಲಾವಿದರಿದ್ದಾರೆ. ಕಲೆಯನ್ನು ಸಿದ್ಧಿಸಿಕೊಳ್ಳುವುದು ಸುಲಭವಲ್ಲ. ಆದರೆ, ಒಮ್ಮೆ ಕಲಿತರೆ ಕಲಾವಿದರ ಜೀವನವೇ ವರ್ಣಮಯವಾಗಿರುತ್ತದೆ ಎಂದು ಹೇಳಿದರು.
ರಂಗಕಲೆಗಳು ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣ ಕೂಡ ಬೆಳೆಯುತ್ತದೆ. ಹೀಗಾಗಿ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜೆಎಸ್ಎಸ್ ಸಂಸ್ಥೆಯು ಆಯೋಜಿಸುತ್ತಿದ್ದ ಎಳೆಯರ ಮೇಳದಲ್ಲಿ ಕಂಸಾಳೆ ಕಲಿಯಲು ದಶಕದ ಹಿಂದೆ ಬಂದಿದ್ದೆ. ಕಲೆಯೇ ನನ್ನನ್ನು ಜೀವನವನ್ನು ರೂಪಿಸಿದೆ. ಎಲ್ಲರೊಂದಿಗೆ ಬೆರೆಯುವ ಹಾಗೂ ಕಲಿಯುವ ಅವಕಾಶವನ್ನು ನೀಡುವ ಕಲಾ ಪ್ರಕಾರಗಳು ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನೂ ನೀಡುತ್ತದೆ ಎಂದರು.
ವಿದ್ಯಾರ್ಥಿಗಳು ಕಲಿಕೆಗೆ ಮಾತ್ರ ಮೊಬೈಲ್ ಬಳಸಬೇಕೇ ಹೊರತು ಅದಕ್ಕೆ ದಾಸರಾಗಬಾರದು. ಪೋಷಕರೂ ಸಹ ಮಕ್ಕಳಿಗೆ ಮೊಬೈಲ್ ತೋರಿಸಿ ಮಗುವಿಗೆ ಊಟ ಮಾಡಿಸುತ್ತಿದ್ದಾರೆ. ದಶಕದ ಹಿಂದೆ ಚಂದ್ರ, ಪ್ರಾಣಿ– ಪಕ್ಷಿಗಳನ್ನು ತೋರಿ ಮಗುವಿಗೆ ಕೈತುತ್ತು ತಿನ್ನಿಸುತ್ತಿದ್ದ ಅಮ್ಮಂದಿರು ಇಂದಿನ ಪೋಷಕರಿಗೆ ಆದರ್ಶವಾಗವೇಕು. ಮೊಬೈಲ್ ಜೀವನದ ಒಂದು ಭಾಗವಷ್ಟೇ. ಅದೇ ಜೀವನವಲ್ಲ ಎಂದು ಕಾರ್ತಿಕ್ ಪ್ರತಿಪಾದಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಇದ್ದರು.
ಕಾರ್ಯಕ್ರಮದ ನಂತರ ಸಿದ್ಧಾರ್ಥ ಬಡಾವಣೆಯ ಜೆಎಸ್ಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಶಕುಂತಲಾ ಹೆಗಡೆ ನಿರ್ದೇಶನದ ಕೋಟಿಗಾನಹಳ್ಳಿ ರಾಮಯ್ಯ ರಚನೆಯ ‘ಒಗಟಿನ ರಾಣಿ’ ನಾಟಕ ಪ್ರದರ್ಶಿಸಿದರು.