ಮನೆ ಕಾನೂನು ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಎಸ್’ಬಿಐ ಬ್ಯಾಂಕಿಗೆ ದಂಡ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಎಸ್’ಬಿಐ ಬ್ಯಾಂಕಿಗೆ ದಂಡ

0

ಧಾರವಾಡ(Dharawad) : ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ. ದಂಡ ಪರಿಹಾರ ಪಾವತಿಸುವಂತೆ ಆದೇಶಿಸಿದೆ.

ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ಸಲ್ಲಿಸಿದ್ದರು. ಈ ಚೆಕ್ ನ್ನು ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಈ ಬಗ್ಗೆ ವಾದಿರಾಜಾಚಾರ್ಯ ಅವರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಆಯೋಗವು ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ.ಕ್ಕಿಂತ ಹೆಚ್ಚು ಹಣ ಇದ್ದರೂ, ಕೇವಲ 6 ಸಾವಿರ ರೂ. ಮೌಲ್ಯದ ಚೆಕ್​ಅನ್ನು ನಿರಾಕರಿಸಿದೆ. ಜೊತೆಗೆ ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನು ಸೇವಾ ನ್ಯೂನ್ಯತೆ ಎಂದು ಪರಿಗಣಿಸಿದೆ. ಇದಕ್ಕಾಗಿ ಹಳಿಯಾಳ ಎಸ್‌ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ ಗಳನ್ನು ಪಾವತಿಸುವಂತೆ ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.

ಹಿಂದಿನ ಲೇಖನಚಿಟಿಕೆ ಅರಿಶಿನದಿಂದ ಹಲ್ಲುಗಳನ್ನು ಪಳಪಳ ಹೊಳೆಯುವಂತೆ ಮಾಡಬಹುದು
ಮುಂದಿನ ಲೇಖನಸೆ. 30ಕ್ಕೆ ಬಹುನಿರೀಕ್ಷಿತ ಚಿತ್ರ ‘ತೋತಾಪುರಿ’ ರಿಲೀಸ್