ಮನೆ ರಾಜಕೀಯ ಹಗರಣ, ಭ್ರಷ್ಟಾಚಾರಗಳೇ ಕಾಂಗ್ರೆಸ್‌ ಆಡಳಿತದ ಸಾಧನೆ: ಸಚಿವ ಡಾ. ಕೆ. ಸುಧಾಕರ್‌

ಹಗರಣ, ಭ್ರಷ್ಟಾಚಾರಗಳೇ ಕಾಂಗ್ರೆಸ್‌ ಆಡಳಿತದ ಸಾಧನೆ: ಸಚಿವ ಡಾ. ಕೆ. ಸುಧಾಕರ್‌

0

ಬೆಂಗಳೂರು: ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ ಸಾಧನೆ ಅಂದರೆ ಅದು ಭ್ರಷ್ಟಾಚಾರ ಮಾತ್ರ. ಭ್ರಷ್ಟಾಚಾರ ಅನ್ನುವ ಪದದ ಹುಟ್ಟಿಗೆ ಕಾರಣವಾಗಿರುವುದೇ ಕಾಂಗ್ರೆಸ್‌ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ದೇಶವಾಳಿದ ಕಾಂಗ್ರೆಸ್‌ ಯಾವುದೇ ಯೋಜನೆ ಮಾಡಿದರೂ ಅದರಲ್ಲಿ ಭ್ರಷ್ಟಾಚಾರ ಇರುತ್ತದೆ. ಅವರಿಗೆ ಅದು ರಕ್ತಗತವಾಗಿ ಬಂದಿದೆ. ಉಳಿದವರು ಕೂಡ ಹಾಗೆಯೇ ಎಂದು ಅಂದುಕೊಂಡು ಅತ್ಯುತ್ತಮ ಆಡಳಿತ ನೀಡುತ್ತಿರುವ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.

2013-2018ರ ತನಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇತ್ತು. ಈ ಸರ್ಕಾರ 5 ವರ್ಷ ಮಾಡಿದ್ದು ಭ್ರಷ್ಟಾಚಾರ ಮಾತ್ರ.  ಆದರೆ, ಇವರು ಇವಾಗ ನಮ್ಮ ಮೇಲೆ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. 2013ರಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಭ್ರಷ್ಟಾಚಾರದ ನಿರ್ಮೂಲನೆ ಬಗ್ಗೆ ನಾವು ಹೇಳಿದ್ದೆವು. ಅದೇ ರೀತಿ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಕೂಡ ಹೇಳಿತ್ತು. ಅವರ ಸರ್ಕಾರ  ರಾತ್ರೋರಾತ್ರಿ ಲೋಕಾಯುಕ್ತ ಮುಚ್ಚಿ, ಎಸಿಬಿ ರಚನೆ ಮಾಡಿತು. ಲೋಕಾಯುಕ್ತ ಸಂಸ್ಥೆಯನ್ನ ಮುಚ್ಚಿದಕ್ಕೆ ಹೈಕೋರ್ಟ್ ಛೀಮಾರಿ ಹಾಕಿತ್ತು. ಲೋಕಾಯುಕ್ತದಂತಹ ಸಂಸ್ಥೆಗಳು ರಾಜ್ಯದಲ್ಲಿ ಇರಬೇಕು ಎಂದು ತಿಳಿಸಿತ್ತು. ಸಿಎಂ ಮೇಲೆ 50-60 ಕಂಪ್ಲೇಟ್‌ ಬಂದ ಮೇಲೆ ತನಿಖೆ ಆಗುತ್ತೆ ಅನ್ನುವ ಭಯಭೀತಿಯಿಂದ ರಾತ್ರೋರಾತ್ರಿ ಲೋಕಾಯುಕ್ತ ಮುಚ್ಚಿ ಎಸಿಬಿ ಸ್ಥಾಪಿಸಿ ಭ್ರಷ್ಟಾಚಾರ ಮುಚ್ಚಿಕ ಹಾಕುವ ಪ್ರಯತ್ನ ಅದಾಗಿತ್ತು ಎಂದು ಹೇಳಿದರು.

ಬಿಜೆಪಿ  ಭ್ರಷ್ಟಾಚಾರ ಮಾಡಿರೋದೆ ಆಗಿದ್ದರೆ, ನಾವು ಲೋಕಾಯುಕ್ತ ಸಂಸ್ಥೆ ಪುನರ್ ಸ್ಥಾಪಿಸಲು ಸ್ಟೇ ತರುತ್ತಿದ್ದೆವು. ಆದರೆ, ನಾವು ಬಂದು ಲೋಕಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದೇವೆ. ಭ್ರಷ್ಟಾಚಾರ ಮಾಡುತ್ತಿದ್ದೇವೆ ಎಂಬುದು ನಿಜವಾಗಿದ್ದರೆ ಇವತ್ತು ನಾವು ಲೋಕಾಯುಕ್ತವನ್ನ ಪುನರ್ ಸ್ಥಾಪನೆ ಮಾಡುತ್ತಿರಲಿಲ್ಲ. ಆದರೆ ನಾವು ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನಿಗಳು ಯಾವ ರೀತಿ ಹೇಳಿದ್ದರೋ, ಹಾಗೆಯೇ ನಾವು ಅದಕ್ಕೆ ಕಾಯಕಲ್ಪ ಕೊಟ್ಟಿದ್ದೇವೆ ಎಂದರು.

2018ರಲ್ಲಿ ಫೈನಾನ್ಸಿಯಲ್ ಅಡಿ ಸಿಎಜಿ ವರದಿ ಪ್ರಕಾರ 2013- 2018 ರಲ್ಲಿ 35 ಸಾವಿರ ಕೋಟಿ ಭ್ರಷ್ಟಾಚಾರನಡೆದಿದೆ. ಡಿ ನೊಟಿಫಿಕೇಷನ್‌ ಅನ್ನುವುದಕ್ಕೆ  ರೀಡೂ ಅನ್ನುವ ಹೊಸ ಪದವನ್ನೇ ಸೃಷ್ಟಿ ಮಾಡಿದ್ದಾರೆ. 10 ಸಾವಿರ ಬೆಂಗಳೂರು ನಿವಾಸಿಗಳಿಗೆ ಅನ್ಯಾಯ ಮಾಡಿದ್ದಾರೆ. 900 ಎಕರೆಗೂ ಹೆಚ್ಚು ಜಾಗವನ್ನ ರೀಡೂ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಇದಲ್ಲವನ್ನು ಮುಚ್ಚಿಹಾಕಲು ಲೋಕಾಯುಕ್ತ ಮುಚ್ಚಿ, ಎಸಿಬಿ ತೆರೆದಿದ್ದರು ಎಂದು ಆರೋಪಿಸಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ  ಕೆ.ಜೆ ಜಾರ್ಜ್‌ ಕಾಂಗ್ರೆಸ್‌ನ ಭ್ರಷ್ಟಾಚಾರಗಳಿಗೆ  ನೆರವಾಗಿದ್ದರು.  292 ಕೋಟಿ ವೈಟ್ ಟಾಪಿಂಗ್ ಅಂದಾಜು ಇತ್ತು, ಅದನ್ನ 374 ಕೋಟಿಗೆ ಹೆಚ್ಚಿಸಿದರು. ಯಾಕೆ ಶೇ.25% ಹೆಚ್ಚಳಕ್ಕೆ ಅನುಮತಿ ನೀಡಿದ್ದರು? ಯಾವ ಉದ್ದೇಶಕ್ಕೆ ಹೆಚ್ಚಿಗೆ ಕೊಟ್ಟಿರಿ?  9.47 ಕಿಮೀ  ಟೆಂಡರ್‌ಶ್ಯೂರ್‌ ರಸ್ತೆ ನಿರ್ಮಿಸಲು ಖಾಸಗಿ ಸಂಸ್ಥೆಯೊಂದು  ₹75 ಕೋಟಿ ಎಷ್ಟಿಮೇಟ್‌ ಕೊಟ್ಟಿತ್ತು. ಆದರೆ ₹115 ಕೋಟಿ ಕೊಟ್ಟಿದ್ದಾರೆ.  ಎಷ್ಟಿಮೇಟ್‌’ಗಿಂತ 53% ಹೆಚ್ಚು ಕೊಟ್ಟಿದ್ದಾರೆ.   ನಮ್ಮ ಸರ್ಕಾರ ಟೆಂಡರ್‌ ಪ್ರೀಮಿಯಂ ಮೇಲೆ 5%  ಹೆಚ್ಚು ಮಾಡಬಾರದು ಎಂದು ಆದೇಶ ಮಾಡಿದ್ದಾರೆ. 50% ಟೆಂಡರ್‌ ಪ್ರೀಮಿಯಂ ತೆಗೆದುಕೊಂಡ ಕಾಂಗ್ರೆಸ್‌ ನಮ್ಮ ಸರ್ಕಾರದ ಮೇಲೆ 40% ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.

ಇಂದಿರಾ ಕ್ಯಾಂಟೀನ್ ಆರಂಭಿಸಿ ಬಡವರಿಗೆ ಕೊಡುವ ಊಟದಲ್ಲೂ ಕಮೀಷನ್ ಹೊಡೆದ ಖ್ಯಾತಿ ನಿಮ್ಮದು . ಅಲ್ಪಸಂಖ್ಯಾತರಿಗೆ, ದಲಿತರಿಗೆ, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಲಿಲ್ಲ. ಅಲ್ಪಸಂಖ್ಯಾತರಿಗೆ ನೀವೇ ಉದ್ಧಾರಕರು ಅಂತ ಹೇಳಿಕೊಂಡು ತಿರುಗುವ ನೀವು 2900 ಎಕ್ರೆ ಜಾಗವನ್ನು ಗುಳುಂ ಮಾಡಿದವರು ನೀವು. ಜನರ ಮೈಂಡ್‌ ಅನ್ನು ತಮ್ಮ ಕಡೆ ತಿರುಗಿಸಲು ಇಂತಹ ಆರೋಪವನ್ನು ಬಿಜೆಪಿ ವಿರುದ್ಧ ಮಾಡಲಾಗುತ್ತಿದೆ.  ಸಿದ್ದರಾಮಯ್ಯನವರ ಆಪ್ತನ ಮನೆ ಮೇಲೆ 2017ರಲ್ಲಿ ರೇಡ್ ಆದಾಗ ಸಿಕ್ಕ ಡೈರಿಯಲ್ಲಿ 1000 ಕೋಟಿ ರೂಪಾಯಿ ಹೈಕಮಾಂಡ್‌ಗೆ ಹೋದ ಬಗ್ಗೆ ಉಲ್ಲೇಖವಿದೆ. ಆದರೆ ಇದು ಯಾರ ಹಣ? ಬಜೆಟ್ ಮೂಲಕವೇ ಸ್ಪೆಷಲ್ ಅನೌನ್ಸ್‌ಮೆಂಟ್‌ ಆಗಿತ್ತಾ ಎಂದು ಪ್ರಶ್ನಿಸಿದರು.

ಪಿಎಸ್’ಐ ಸ್ಕ್ಯಾಮ್ ಆಗಿದೆ ಅಂತ ಹೇಳ್ತೀರಿ. ಇದು ನಿಮ್ಮ ಕಾಲದಲ್ಲೇ ಆಗಿದ್ದು. ಮಾಜಿ ಪೊಲೀಸ್‌ ಅಧಿಕಾರಿ ನಿಮ್ಮ ಗೃಹ ಇಲಾಖೆಯ ಸಹಲೆಗಾರರು ಕೆಂಪಯ್ಯ ಹೆರಿನಲ್ಲೇ ಕೇಸ್‌ಗಳು ದಾಖಲಾಗಿದೆ. ಕಸ ವಿಲೇವಾರಿ ಮಾಡೋದ್ರಲ್ಲೂ 1,066 ಕೋಟಿ ರೂ.  ಹಗರಣ ಮಾಡಿದ್ದಾರೆ. ಕಸ ವಿಲೇವಾರಿ ಮಾಡುವುದರಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ.  2015-16ರಲ್ಲಿ 385ಕೋಟಿ ಖರ್ಚಾಗಿದೆ‌. ಕೇವಲ ಒಂದೇ ವರ್ಷದಲ್ಲಿ 681ಕೋಟಿ ಹೆಚ್ಚಾಗಿದೆ. ಇದು ಯಾವ ಸ್ಕೀಮ್, ಎಷ್ಟು ಪರ್ಸೆಂಟ್ ಆಗಿದೆ ಹೇಳಿ? ಬೆಂಗಳೂರಿಗೆ ಹೊರ ಹೋಗುವ ಕಸ ಮಾಯ ಆಗಿ ಹೋಯ್ತಾ? ನಾನು ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಅಧ್ಯಕ್ಷನಾಗಿದ್ದಾಗ ನೋಡಿದ್ದೇನೆ. ಆ ಪ್ರದೇಶದ ಜನ ರೋಗಗ್ರಸ್ತರಾಗಿದ್ರು ಎಂದೂ ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ಕಾಂಗ್ರೆಸ್‌ ವಿರುದ್ಧ ಟೀಕೆ ಮಾಡಿದ್ದಾರೆ.

ಬೆಂಗಳೂರು ಅಭಿವೃದ್ಧಿ ಬಗ್ಗೆ ಮಾತನಾಡುವ ಕಾಂಗ್ರೆಸ್‌ ತನ್ನ ಆಡಳಿತದ 5 ವರ್ಷದಲ್ಲಿ 13,840 ಕೋಟಿ ಕೇಂದ್ರ ಸರ್ಕಾರದ ನೆರವಿನಿಂದ ಕೇವಲ 43. ಕಿ.ಮೀ ಮಾರ್ಗ ಮಾಡಿತ್ತು. ಆದರೆ ನಾವು 75 ಕಿ.ಮೀ.,  61 ಸ್ಟೇಷನ್‌ ನಿರ್ಮಿಸಿದ್ದೇನೆ. 30,695 ಕೋಟಿ ಖರ್ಚು ಮಾಡಿ ಬಿಜೆಪಿ ಸರ್ಕಾರ ಬದ್ಧತೆ ಮತ್ತು ಅಭಿವೃದ್ಧಿಯ ಅಜೆಂಡಾವನ್ನು ತೋರಿಸಿದ್ದೇವೆ ಎಂದರು. 

ಮಹಿಳಾ ಮತ್ತು ಮಕ್ಕಳ ಇಲಾಖೆ, ಪಡಿತರ ಇಲಾಖೆ, ನೀರಾವರಿ, ಉನ್ನತ ಶಿಕ್ಷಣ, ಆರೋಗ್ಯ ಇಲಾಖೆ,  ಗಣಿ ಇಲಾಖೆ ಎಲ್ಲಿ ನೋಡಿದರೂ ಕಾಂಗ್ರೆಸ್‌’ನದ್ದು ಭ್ರಷ್ಟಾಚಾರದ ಇತಿಹಾಸ ಕಾಣುತ್ತದೆ. ಪರಿಶಿಷ್ಟ ಜಾತಿ, ಪಂಗಡ ಜನರ ಪ್ರತಿನಿಧಿ ಅಂತ ಹೇಳಿಕೊಳ್ಳುವ ನೀವು ಮೀಸಲಾತಿ ಹೆಚ್ಚಳ ನೀಡಲಿಲ್ಲ. ನಿಮಗೆ ಬೇಕಾಗಿದ್ದು ಮತ ಮಾತ್ರ. ಅವರ ಅಭಿವೃದ್ಧಿ ಬೇಕಾಗಿರಲಿಲ್ಲ. ನಮ್ಮ ಸರ್ಕಾರ ಅವರಿಗೆ ಬದ್ಧತೆಯಿಂದ ಮೀಸಲಾತಿ ನೀಡಿದೆ. ಪುಕ್ಕಟೆ ಪ್ರಚಾರ ತೆಗೆದುಕೊಳ್ಳುವ ನಿಮ್ಮಿಂದ ಏನಾದರೂ ಉಪಯೋಗವಾಗಿದೆಯೇ? ಎಂದು ಪ್ರಶ್ನಿಸಿದರು.

ರಾಜ್ಯದ ಜನರು ಅಭಿವೃದ್ಧಿ ಅಜೆಂಡಾದ ಬಗ್ಗೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ಮುಂದಿನ ಬಾರಿ 125-150 ಸೀಟುಗಳನ್ನು ಗೆಲ್ಲಿಸಿ ಮತ್ತೊಮ್ಮೆ ಅಧಿಕಾರ ಮಾಡಲು ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.

ಹಿಂದಿನ ಲೇಖನಅಂಡಮಾನ್ ನಿಕೋಬಾರ್’ನ 21 ದ್ವೀಪಗಳಿಗೆ ಪರಮವೀರ ಚಕ್ರ ಸ್ವೀಕರಿಸಿದ ಯೋಧರ ಹೆಸರು
ಮುಂದಿನ ಲೇಖನಕಾಡು ಪ್ರಾಣಿಗಳ ಹಾವಳಿ, ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ: ಕುರುಬೂರು ಶಾಂತ್ ಕುಮಾರ್ ಆರೋಪ