ಮನೆ ಅಪರಾಧ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ: ಪ್ರಕರಣ ದಾಖಲು

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ: ಪ್ರಕರಣ ದಾಖಲು

0

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಾಗೂ ಇತರರು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರದ ವಿದ್ಯಾ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿ ಪ್ರತೀಕ್ (17) ಇತ್ತೀಚೆಗಷ್ಟೇ ಸೆಕೆಂಡ್ ಹ್ಯಾಂಡ್ ಬೈಕ್ ಅನ್ನು ಖರೀದಿಸಿದ್ದನು. ಈ ಬೈಕ್​​​ ಅನ್ನು ಸಹಪಾಠಿ ಸುಹಾಸ್​ ಕದ್ದಿದ್ದಾನೆಂದು ಪ್ರತೀಕ್​ ಆರೋಪ ಮಾಡಿದ್ದಾನೆ. ಪ್ರತೀಕ್​​ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾನೆ ಎಂದು ಸಹಾಸ್ ಕೆಂಡ ಕಾರುತ್ತಿದ್ದನು. ​

ಇದೇ ಕೋಪದಲ್ಲಿ ಜನವರಿ 28 ರ ಸಂಜೆ ಸುಹಾಸ್​ ಮತ್ತು ಆತನ ಸ್ನೇಹಿತ ತರುಣ್ ಕರೆ ಮಾಡಿ, ಪ್ರತೀಕ್​ ನನ್ನು ಅವಾಚ್ಯವಾಗಿ ನಿಂದಿಸಿದರು. ಬಳಿಕ ಸುಹಾಸ್ ಜನವರಿ 29 ರಂದು ಮಧ್ಯಾಹ್ನ 12:15ರ ಸುಮಾರಿಗೆ ಪ್ರತೀಕ್‌ ನನ್ನು ಎಂಜಿಎಂ ಮೈದಾನಕ್ಕೆ ಕರೆಸಿಕೊಂಡಿದ್ದಾನೆ. ಅಲ್ಲಿಗೆ ಬಂದ ಪ್ರತೀಕ್‌ ಗೆ ಸುಹಾಸ್, ಮೋನಿಶ್, ತರುಣ್ ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದರು. ಇದೆ ವೇಳೆ ತರುಣ್ ಪ್ರತೀಕ್‌ ನ ಹೊಟ್ಟೆ ಮತ್ತು ಎಡ ಸೊಂಟಕ್ಕೆ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ 143, 147, 148, 323, 324, 504, 506, 307, ಮತ್ತು 149 ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ ರಾಜ್ಯಪಾಲರು
ಮುಂದಿನ ಲೇಖನಬಜೆಟ್‌ ಅಧಿವೇಶನ ಆರಂಭ: ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಿ- ಪ್ರಧಾನಿ ಮೋದಿ ಮನವಿ