ಮನೆ ಅಪರಾಧ ಪ್ರತ್ಯೇಕ ಘಟನೆ: ಎರಡು ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು

ಪ್ರತ್ಯೇಕ ಘಟನೆ: ಎರಡು ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು

0

ಚಾಮರಾಜನಗರ(Chamarajangara): ಆಟೋವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಗರದ ಬಿ.ರಾಚಯ್ಯ ಜೋಡಿ‌ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಕೋಡಿಮೋಳೆ ಗ್ರಾಮದ ಗಣೇಶ್ ಶೆಟ್ಟಿ (55) ಎಂದು ಗುರುತಿಸಲಾಗಿದೆ.

ಅತಿವೇಗವಾಗಿ ಆಟೋ ಚಲಾಯಿಸುತ್ತಿದ್ದರಿಂದ ಬ್ಯಾರಿಕೇಡ್​ಗೆ ಡಿಕ್ಕಿ ತಪ್ಪಿಸಲು ಹೋಗಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

ಬೈಕ್ ಸವಾರ ಸಾವು: ಚಾಮರಾಜನಗರ ತಾಲೂಕಿನ‌ ನಾಗವಳ್ಳಿ ಗ್ರಾಮದಲ್ಲಿ ಹಬ್ಬದ ವಸ್ತುಗಳನ್ನು ತೆಗೆದುಕೊಂಡು ಹೋಗುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಕರಳುಮೋಳೆ ಗ್ರಾಮದ ಸ್ವಾಮಿ (35) ಮೃತರು ಎಂದು ತಿಳಿದುಬಂದಿದೆ.

ನಿಂತಿದ್ದ ಈಚರ್’ಗೆ ಬಸ್ ಡಿಕ್ಕಿ: ನಾಲ್ವರಿಗೆ ಗಾಯ

ಮತ್ತೊಂದೆಡೆ ನಿಂತಿದ್ದ ಈಚರ್ ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಾಮರಾಜನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ ಸಂಭವಿಸಿದೆ. ಚಾಲಕ ಫೋನಿನಲ್ಲಿ ಮಾತನಾಡುತ್ತ ಬಸ್ ಚಲಾಯಿಸಿದ್ದೇ ಈ ಅವಘಡಕ್ಕೆ ಕಾರಣ ಎಂದು ಪ್ರಯಾಣಿಕರು ದೂರಿದ್ದಾರೆ.

ಹಿಂದಿನ ಲೇಖನಕೈಕೊಟ್ಟ ವಾಟ್ಸಪ್: ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ
ಮುಂದಿನ ಲೇಖನನಮ್ಮ ಕುಟುಂಬಕ್ಕೆ ರಕ್ಷಣೆ ನೀಡಿ: ಹರ್ಷ ಸಹೋದರಿ ಅಶ್ವಿನಿ