ಮನೆ ರಾಜ್ಯ ದಾವಣಗೆರೆಯಲ್ಲಿ ಸರಣಿ ಅಪಘಾತ: ಓರ್ವ ಸಾವು, 9 ಮಂದಿಗೆ ಗಾಯ

ದಾವಣಗೆರೆಯಲ್ಲಿ ಸರಣಿ ಅಪಘಾತ: ಓರ್ವ ಸಾವು, 9 ಮಂದಿಗೆ ಗಾಯ

0

ದಾವಣಗೆರೆ: ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುತ್ತಾಲ ಗ್ರಾಮದ ಹನುಮಂತಪ್ಪ (58) ಮೃತರು.

ಗಂಭೀರವಾಗಿ ಗಾಯಗೊಂಡ ಒಂಬತ್ತು ಜನರ ಪೈಕಿ, ಐವರ ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೈತರು ರೇಷ್ಮೆ ಬೆಳೆ ಮಾರಾಟ ಟಾಟಾ ಎಸ್‌ ವಾಹನದಲ್ಲಿ ರಾಮನಗರಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಟಯರ್ ಬ್ಲಾಸ್ಟ್ ಆಗಿ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೆಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಬಸ್ ಹಾಗೂ ಕಾರಿಗೂ ಗುದ್ದಿದೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಲಿಂಗಾಚಾರ್
ಮುಂದಿನ ಲೇಖನಉತ್ತರ ಪ್ರದೇಶದಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 6 ಮಂದಿ ಸಜೀವ ದಹನ