ಮನೆ ಅಪರಾಧ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಅವಮಾನ ತಾಳಲಾರದೇ ಆತ್ಮಹತ್ಯೆಗೆ ಶರಣಾದ ತಂದೆ

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಅವಮಾನ ತಾಳಲಾರದೇ ಆತ್ಮಹತ್ಯೆಗೆ ಶರಣಾದ ತಂದೆ

0

ಮೈಸೂರು(Mysuru): ಮಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಪ್ರಶ್ನಿಸಲು ಹೋದ ಸಂತ್ರಸ್ತೆಯ ಕುಟುಂಬದವರಿಗೆ ಆರೋಪಿಯ ಕುಟುಂಬದವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅವಮಾನ ತಾಳಲಾರದೇ ಸಂತ್ರಸ್ತೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕಿ ಒಬ್ಬರೇ ಓದಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಅದೇ ಗ್ರಾಮದ ಸ್ವಾಮಿ ಗೌಡ ಅವರ ಮಗ ಶಿವರಾಜು ಮನೆಗೆ ಬಂದಿದ್ದಾನೆ. ಬಳಿಕ ಬಾಲಕಿಯ ಪೋಷಕರನ್ನು ನೋಡಿ ಓಡಿ ಹೋಗಿದ್ದಾನೆ. ಈ ವೇಳೆ, ಬಾಲಕಿ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.

ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವಿಚಾರದ ಬಗ್ಗೆ ಮಾತನಾಡಲು ನಾನು ಮತ್ತು ನನ್ನ ಪತಿ ಸ್ವಾಮಿಗೌಡರ ಮನೆಗೆ ತೆರಳಿದ್ದೇವು. ಸ್ವಾಮಿಗೌಡರ ಪತ್ನಿ ಶೈಲಜಾ ನಮ್ಮಿಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ ಮತ್ತೊಮ್ಮೆ ನನ್ನ ಮನೆ ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ನನ್ನ ಗಂಡ ನಮ್ಮ ಮನೆಯ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ತಾಯಿ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಶಿವರಾಜು ವಿರುದ್ಧ ಪೋಕ್ಸೋ ಕಾಯ್ದೆಯಡಿ ಹಾಗೂ ಈತನ ತಂದೆ ಸ್ವಾಮಿ ಗೌಡ ಮತ್ತು ತಾಯಿ ಶೈಲಜಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನರಾಜ್ಯಸಭೆ ಚುನಾವಣೆ: ಬಿಜೆಪಿಯ 75, ಕಾಂಗ್ರೆಸ್‌ನ 23, ಜೆಡಿಎಸ್‌ನ 7 ಶಾಸಕರಿಂದ ಮತ ಚಲಾವಣೆ
ಮುಂದಿನ ಲೇಖನಜೂನ್ 13 ರಂದು ವಿಧಾನ ಪರಿಷತ್ ಚುನಾವಣೆ: ಮತದಾರ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ