ಮಂಗಳೂರು: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ ಸಿ-2 ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಹಾವೇರಿ ಜಿಲ್ಲೆಯ ನೆಲೋಗಲ್ ಗ್ರಾಮದ ಬೆನಕರಾಜ್ ಲಮಾಣಿ ಆಲಿಯಾಸ್ ರಾಜ್ (25) ಶಿಕ್ಷೆಗೊಳಗಾದಾತ. ಈತ ಹೋಮ್ ನರ್ಸ್ ಆಗಿದ್ದ. ನೊಂದ ಬಾಲಕಿಯ ಅಜ್ಜ ಅಸೌಖ್ಯದಿಂದ ಸುರತ್ಕಲ್ ಪರಿಸರದ ಮನೆಯಲ್ಲಿದ್ದರು. ಅವರನ್ನು ನೋಡಿಕೊಳ್ಳಲು ಆರೋಪಿಯನ್ನು ಕರೆಸಿಕೊಳ್ಳಲಾಗಿತ್ತು.
2022ರ ಜನವರಿಯಲ್ಲಿ ಒಂದು ದಿನ ಬಾಲಕಿಯ ತಾಯಿ ಔಷಧ ತರಲೆಂದು ಮನೆಯಿಂದ ಹೊರಗೆ ಹೋಗಿದ್ದಾಗ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದ. ಅಲ್ಲದೆ ಕಚ್ಚಿ ಗಾಯಗೊಳಿಸಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅ. 5ರಂದು ತೀರ್ಪು ನೀಡಿದ್ದಾರೆ. ಆರೋಪಿಯ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐಪಿಸಿ ಕಲಂ 376 ಮತ್ತು ಪೋಕ್ಸೋ ಕಲಂ 6ರ ಅಡಿಯಲ್ಲಿ 20 ವರ್ಷ ಕಠಿನ ಸಜೆ ಮತ್ತು 25,000 ರೂ. ದಂಡ, ಐಪಿಸಿ ಕಲಂ 323ರಡಿಯಲ್ಲಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ ವಿಧಿಸಿದ್ದಾರೆ.
ನೊಂದ ಬಾಲಕಿಗೆ 2 ಲಕ್ಷ ರೂ. ಪರಿಹಾರ ನೀಡಲು ಆದೇಶ ನೊಂದ ಬಾಲಕಿಗೆ 2 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ.
ಅಭಿಯೋಜನೆಯ ಪರ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.