ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಮಾಡಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು 7 ಜನ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದುಕೊಂಡಿರುವ ವಿದ್ಯಾರ್ಥಿಗಳೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಎಂದು ತಿಳಿದುಬಂದಿದೆ.
ಫೆ. 8 ರಂದು ನಿಮ್ಹಾನ್ಸ್ ಕನ್ವೆನ್ಸನ್ ಸೆಂಟರ್’ನಲ್ಲಿ ಜೈನ್ ವಿವಿಯಿಂದ ಹಮ್ಮಿಕೊಂಡಿದ್ದ ಫೆಸ್ಟ್ ಕಾರ್ಯಕ್ರಮದಲ್ಲಿ ನಾಟಕದ ಸ್ಕಿಟ್’ವೊಂದರಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಬಿ.ಆರ್ ಬದಲು ಬೇರೆ ಪದ ಬಳಸಿ ಗೇಲಿ ಮಾಡಲಾಗಿತ್ತು. ಅಂಬೇಡ್ಕರ್ ಅವಮಾನಿಸಿದ ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಎಂಬುವರು ನೀಡಿದ ದೂರಿನ ಮೇರೆಗೆ ಕಾಲೇಜು ಪ್ರಾಂಶುಪಾಲ, ಡೀನ್, ಕಾರ್ಯಕ್ರಮದ ಆಯೋಜಕರು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಹಾಗೂ ಸ್ಕಿಟ್ ಬರಹಗಾರರ ವಿರುದ್ಧ ಜಾತಿ ನಿಂದನೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿದ್ಧಾಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.