ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಶಿವಮೊಗ್ಗ(Shivamogga): ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಮುಂದಿಟ್ಟುಕೊಂಡು ತಾಲ್ಲೂಕಿನ ಆಯನೂರಿನಿಂದ ಶಿವಮೊಗ್ಗಕ್ಕೆ ಸೋಮವಾರ ಬೆಳಿಗ್ಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಪಾದಯಾತ್ರೆ ಆರಂಭಿಸಿದ್ದಾರೆ.
ಪಾದಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಸಾವಿರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಶರಾವತಿ ಯೋಜನೆಯ ಮುಳುಗಡೆ ಸಂತ್ರಸ್ತರ ಕುಟುಂಬದವರು, ಕಾಂಗ್ರೆಸ್ ಪಕ್ಷದ ಸದಸ್ಯರು, ಪದಾಧಿಕಾರಿಗಳು ಹಾಗೂ ಮುಖಂಡರು ಮಧು ಬಂಗಾರಪ್ಪ ಅವರ ಜೊತೆಗೆ ಹೆಜ್ಜೆ ಹಾಕಿದ್ದು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಪಕ್ಷದ ಧ್ವಜ ರಾರಾಜಿಸುತ್ತಿದೆ.
ಶಿವಮೊಗ್ಗ–ಸಾಗರ ಮುಖ್ಯರಸ್ತೆಯ ಒಂದು ಭಾಗದಲ್ಲಿ ಪಾದಯಾತ್ರಿಗಳ ನಡಿಗೆಗೆ ಅವಕಾಶ ಮಾಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.
ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಕಾಗೋಡು ತಿಮ್ಮಪ್ಪ
ಆಯನೂರಿನ ಎಪಿಎಂಸಿ ಮೈದಾನದ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪಾದಯಾತ್ರೆಗೆ ಚಾಲನೆ ನೀಡಿದರು.
ಮಧು ಬಂಗಾರಪ್ಪ ಅವರೊಂದಿಗೆ ಕಿ.ಮೀನಷ್ಟು ದೂರ ಇಳಿ ವಯಸ್ಸಿನಲ್ಲೂ ಕಾಗೋಡು ತಿಮ್ಮಪ್ಪ ಹೆಜ್ಜೆ ಹಾಕಿದ್ದು, ಪಾದಯಾತ್ರಿಗಳಲ್ಲಿ ಉತ್ಸಾಹ ಮೂಡಿಸಿತು. ಜಯಘೋಷ ಮುಗಿಲುಮುಟ್ಟಿತು.
ಧ್ರುವನಾರಾಯಣ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾದಯಾತ್ರೆಯಲ್ಲಿ ಸಾಗಿ ಬಂದರು.
ಪಾದಯಾತ್ರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಆಗಿ ಬದಲಾಗಿದ್ದು, ನಾಯಕರು ಮುನಿಸು ಮರೆತು ಸಾಗಿ ಬಂದರು. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸಿರುವವರ ಬಲ ಪ್ರದರ್ಶನಕ್ಕೂ ಆಯನೂರು–ಶಿವಮೊಗ್ಗ ನಡುವಿನ ಹಾದಿ ಸಾಕ್ಷಿಯಾಗಿದೆ. ಟಿಕೆಟ್ ಆಕಾಂಕ್ಷಿಗಳು ತಮ್ಮೊಂದಿಗೆ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರನ್ನು ಕರೆತಂದಿದ್ದಾರೆ. ಬಾಡಿಗೆ ಬಸ್ಗಳಲ್ಲಿ ಆಯನೂರಿಗೆ ಬಂದಿದ್ದ ಸಂತ್ರಸ್ತರಿಗೆ ಅಲ್ಲಿನ ಸಂತೆ ಮೈದಾನದಲ್ಲಿ ಉಪ್ಪಿಟ್ಟು–ಕೇಸರಿ, ಚಹಾ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ನಾಷ್ಟಾ ಸವಿದು ನಾಯಕರೊಂದಿಗೆ ಹೆಜ್ಜೆ ಹಾಕಿದರು.