ಹಾವೇರಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ.
ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ ಸಫಲವಾಗಿದೆ.
13,448 ಮತಗಳ ಅಂತರದ ಗೆಲುವು
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಯಾಸೀರ್ ಪಠಾಣ್ ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.
ಅಜ್ಜಂಪೀರ್ ಖಾದ್ರಿ ಬಂಡಾಯ ಶಮನ ಆಗಿದ್ದು ಪಠಾಣ್ಗೆ ಪ್ಲಸ್ ಆಯಿತು. ಇಷ್ಟೇ ಅಲ್ಲ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿನ ರಣತಂತ್ರ ಹೆಣೆದಿದ್ದು, ವಾಲ್ಮೀಕಿ, ದಲಿತ ಮತದಾರರು ‘ಕೈ’ ಹಿಡಿದ ಲೆಕ್ಕಾಚಾರ ನಾಯಕರಿಗೆ ಇದೆ. ಸಚಿವ ಜಮೀರ್ ಮುಸ್ಲಿಂ ಮತದಾರರ ಓಲೈಕೆ ಮಾಡಿದ್ದು, ಪಠಾಣ್ ಪರ ಅಜ್ಜಂಪೀರ್ ಖಾದ್ರಿ ಪ್ರಚಾರ ಮಾಡಿದ್ದು, ಸಿಎಂ ಮುಡಾ ಸಂಕಷ್ಟದ ಅನುಕಂಪ ವರ್ಕೌಟ್ ಆಗಿದ್ದಲ್ಲದೇ, ಕುರುಬ ಸಮಾಜದ ಮತ ಕಾಂಗ್ರೆಸ್ಗೆ ವಾಲಿದ ನಂಬಿಕೆ ಆ ಪಕ್ಷದ ನಾಯಕರಲ್ಲಿದೆ.