ಮದ್ದೂರು:ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇತ್ತೀಚೆಗೆ ಮದ್ದೂರು ತಾಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಇ-ತಂತ್ರಾಂಶ ಜಾರಿ ಕುರಿತು ತಪ್ಪು ಮಾಹಿತಿ ನೀಡಿದ್ದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಮದ್ದೂರು ತಾಲೂಕು ಕಚೇರಿಯ ಆಡಳಿತ ಶಿರಸ್ತೇದಾರ್ ಚಂದ್ರಶೇಖರ್ ಅಮಾನತುಗೊಂಡಿರು ವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಇ-ಆಫೀಸ್ ಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿದಾಗ, ಪೂರ್ಣ ಪ್ರಮಾಣದಲ್ಲಿ ತಂತ್ರಾಂಶವನ್ನು ಅನುಷ್ಟಾನಗೊಳಿಸದೇ ಇರುವುದು ಕಂಡು ಬಂದಿತ್ತು.
ಅಲ್ಲದೆ ತಂತ್ರಾಂಶ ಅನುಷ್ಠಾನ ಕುರಿತು ತಪ್ಪು ಮಾಹಿತಿ ನೀಡಿರುವುದಕ್ಕೆ ಹಾಗೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದ್ದರು.
ಹಲವು ಕಾಲಾವಕಾಶ ನೀಡಿದ್ದರೂ ಸಹ ಇ-ಆಫೀಸ್ ತಂತ್ರಾಂಶವನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ತರುವಲ್ಲಿ ಕ್ರಮ ವಹಿಸದೇ ಇರುವುದರಿಂದ ಮದ್ದೂರು ತಾಲೂಕು ಕಚೇರಿಯ ಆಡಳಿತ ಶಿರಸ್ತೇದಾರ್ ಚಂದ್ರಶೇಖರ್ ಸರ್ಕಾರಿ ಸೇವೆಯಿಂದ ಅಮಾನತ್ತು ಮಾಡಲಾಗಿದೆ.
ನಮ್ಮ ಹೆಮ್ಮೆಯ ಮೈಸೂರು
ಒಂದು ಅದ್ಭುತ. ಫುಟ್ಬಾಲ್ನ ಸಂಯೋಜನೆ..
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.