ಮನೆ ಸುದ್ದಿ ಜಾಲ ಆಘಾತಕಾರಿ ಘಟನೆ: ಒಳಮೀಸಲಾತಿ ಸಮೀಕ್ಷೆ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು!

ಆಘಾತಕಾರಿ ಘಟನೆ: ಒಳಮೀಸಲಾತಿ ಸಮೀಕ್ಷೆ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು!

0

ಕಲಬುರಗಿ : ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಒಳಮೀಸಲಾತಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ಗುರುವಾರ ನಡೆದಿದೆ. ಈ ಘಟನೆ ಸ್ಥಳೀಯ ಶಿಕ್ಷಕ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಆಘಾತವನ್ನುಂಟುಮಾಡಿದೆ.

ಮೃತರಾದವರು ನಾಗಶೆಟ್ಟಿ ಅಮೃತಪ್ಪ ಬಾಸಪಳ್ಳಿ (50) ಎಂಬುವರು, ಬುರಗಪಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಅವರು 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡು, ಸೇವೆ ಸಲ್ಲಿಸುತ್ತಿದ್ದರು.

ಮಾಹಿತಿಯ ಪ್ರಕಾರ, ನಿಗದಿಪಡಿಸಲಾದ ಒಳಮೀಸಲಾತಿ ಸಮೀಕ್ಷೆಯ ಭಾಗವಾಗಿ ಅವರು ಗುರುವಾರ ಬೆಳಿಗ್ಗೆ 11.30ರ ಸುಮಾರಿಗೆ ಚತ್ರಸಾಲ ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿದೆ. ತಕ್ಷಣ ಅವರ ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ ಅವರು ಮಾರ್ಗಮಧ್ಯದಲ್ಲಿಯೇ ಕೊನೆಯುಸಿರು ಎಳೆದಿದ್ದಾರೆ.

ನಾಗಶೆಟ್ಟಿಯವರಿಗೆ ಪತ್ನಿಯು ಹಾಗೂ ಮೂವರು ಮಕ್ಕಳಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಅಂತ್ಯಕ್ರಿಯೆ ಶುಕ್ರವಾರ ಅವರ ಸ್ವಗ್ರಾಮ ಬುರಗಪಲ್ಲಿಯಲ್ಲಿ ನೆರವೇರಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಹ ಶಿಕ್ಷಕರು ಸಂತಾಪ ವ್ಯಕ್ತಪಡಿಸಿದ್ದಾರೆ.