ಮನೆ ಸುದ್ದಿ ಜಾಲ ಅಂಗಡಿ ಮಾಲೀಕನಿಗೆ ಚಾಕು ಇರಿತ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ..!

ಅಂಗಡಿ ಮಾಲೀಕನಿಗೆ ಚಾಕು ಇರಿತ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ..!

0

ಚಿತ್ರದುರ್ಗ : ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಚಿತ್ರದುರ್ಗದ ಸಂತೆ ಮೈದಾನದಲ್ಲಿ ನಡೆದಿದೆ. ವಿಕ್ರಮ್‌ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್‌ ಸ್ಕ್ರೀನ್‌ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್‌ನ ಮೊಬೈಲ್‌ ಸ್ಕ್ರೀನ್‌ಗೆ 100 ರೂ. ಹೆಚ್ಚುವರಿ ಆಗುತ್ತದೆ ಎಂದು ಹೇಳಿದ್ದಾರೆ.

100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಕ್ರಮ್‌ ಚೌದ್ರಿ ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ವಿಕ್ರಮ್‌ ಚೌದ್ರಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಕ್ಕೆ ಚಾಕು ಇರಿಯಲಾಗಿದೆ. ಕೂಡಲೇ ಆರೋಪಿಯನ್ಗನು ಅರೆಸ್ಟ್‌ ಮಾಡಬೇಕು. ಬಂಧನ ಮಾಡದೇ ಇದ್ದರೆ ನಾಳೆ ಚಿತ್ರದುರ್ಗ ಬಂದ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.