ಮೈಸೂರು: ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ ನಡೆದ ಜಿಲ್ಲಾ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದ 24 ಗಂಟೆಯ ಒಳಗೆ ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಮಿತಿಯವರು ಆ ಸ್ಧಳಕ್ಕೆ ಭೇಟಿ ಮಾಡಿ ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು.
ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ಅರ್ಹ ರೈತ ಕುಟುಂಬಕ್ಕೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯಗಳಾದ ಮೃತ ರೈತರ ಪತ್ನಿಗೆ 2000 ರೂ.ಗಳ ಮಾಸಾಶನ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಹಾಗೂ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ, ಜಿಲ್ಲಾ ಸಹಕಾರ ನಿಬಂಧಕರು,ಜಿಲ್ಲಾ ವೈಧ್ಯಾಧಿಕಾರಿಗಳು,ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.