ಮನೆ ರಾಜ್ಯ ಸಿದ್ದಗಂಗಾ ಶ್ರೀಗಳ ಸೇವೆ ಸದಾ  ಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

ಸಿದ್ದಗಂಗಾ ಶ್ರೀಗಳ ಸೇವೆ ಸದಾ  ಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

0

ಬೆಂಗಳೂರು: ಸಿದ್ದಗಂಗಾ ಲಿಂಗೈಕ್ಯ ಡಾ.ಶಿವಕುಮಾರ ಶ್ರೀ ಗಳು ಮಾಡಿರುವ ಸಾಮಾಜಿಕ ಸೇವೆಯನ್ನು ಬೇರೆ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಣ್ಣಿಸಿದರು.

ನಾಗಪುರದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ವೃತ್ತದಲ್ಲಿಂದು ಹಮ್ಮಿಕೊಂಡಿದ್ದ ನಡೆದಾಡುವ ದೇವರು ಡಾ.ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತ್ರಿವಿಧ ದಾಸೋಹದ ಮೂಲಕ ಇಡೀ ಜಗತ್ತಿನ ‌ಗಮನ ಸೆಳೆದಿದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ ಅವರು ಹಾಕಿಕೊಟ್ಟಿರುವ ಹಾದಿ ಅತ್ಯಂತ ಮಾನವೀಯ ‌ಮೌಲ್ಯಗಳಿಂದ ಕೂಡಿದೆ. ತಮ್ಮ ಬದುಕಿನ ಉದ್ದಕ್ಕೂ ಅವರು ಕೈ ಗೊಂಡ ಸೇವೆಯನ್ನು ಶತಮಾನಗಳೆ ಗತಿಸಿದರೂ ಬೇರೆ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದರು.

ಶ್ರೀಗಳನ್ನು ನೆನಪು ಮಾಡಿಕೊಳ್ಳುವ ಈ ರೀತಿಯ ಕಾರ್ಯಕ್ರಮವನ್ನು ಎಲ್ಲರೂ ಪಕ್ಷ, ಜಾತಿ ಬೇಧಗಳನ್ನು ಬದಿಗಿಟ್ಟು ಮಾಡಬೇಕಿದೆ.ಭವಿಷ್ಯದ ಪೀಳಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಅವರು ಮಾಡಿರುವ ಕಾರ್ಯವನ್ನು ನಾವೆಲ್ಲರೂ ಸದಾ ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ‌ ಘಟಕದ ಉಪಾಧ್ಯಕ್ಷ ಜಯರಾಮಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರ ಕುಮಾರ್,ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ಜಯಸಿಂಹ , ಅವೀನ್ ಆರಾಧ್ಯ,ರೈಲ್ವೆ ನಾರಾಯಣ್, ಪ್ರಸನ್ನ, ಶಿವಾನಂದ ಮೂರ್ತಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಹಿಂದಿನ ಲೇಖನನ್ಯೂಜಿಲೆಂಡ್ ಎದುರು ಒಡಿಐ ಸರಣಿ ಗೆದ್ದ ಭಾರತ
ಮುಂದಿನ ಲೇಖನಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿಯೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಹೆಚ್ ಪಿ ಮಂಜುನಾಥ್