ಮನೆ ರಾಜಕೀಯ ಕಾಂಗ್ರೆಸ್ ‘ಪ್ರಜಾ ಧ್ವನಿ ಯಾತ್ರೆ’ಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿಕೆಶಿ

ಕಾಂಗ್ರೆಸ್ ‘ಪ್ರಜಾ ಧ್ವನಿ ಯಾತ್ರೆ’ಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿಕೆಶಿ

0

ಹೊಸಪೇಟೆ (ವಿಜಯನಗರ): ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆಯ ಕಾರ್ಯಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

ಬಸ್ಸಿನಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನಸಭೆ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವು ಮುಖಂಡರು ಆಗಮಿಸಿದ್ದು, ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಂಡಿದೆ.

ಸಮಾರಂಭದಲ್ಲಿ ಕಿಕ್ಕಿರಿದು ಜನ ಸೇರಿದ್ದಾರೆ. ಅದರಲ್ಲೂ ನಿರೂಪಕರು ಸಿದ್ದರಾಮಯ್ಯನವರ ಹೆಸರು ಹೇಳುತ್ತಿದ್ದಂತೆ ಕಾರ್ಯಕರ್ತರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸುತ್ತಿದ್ದಾರೆ.

ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಇನ್ನಷ್ಟೇ ಉದ್ಘಾಟನಾ ಸಮಾರಂಭ ನಡೆದು ನಾಯಕರು ಮಾತನಾಡಬೇಕಿದೆ.

ಹಿಂದಿನ ಲೇಖನರಾಜ್ಯಕ್ಕೆ ಬಿಜೆಪಿ ಸಂಸ್ಕೃತಿ ಗೊತ್ತಾಗಿದೆ: ಎಚ್.ಡಿ ಕುಮಾರಸ್ವಾಮಿ
ಮುಂದಿನ ಲೇಖನಸ್ಯಾಂಟ್ರೋ ರವಿ ಪ್ರಕರಣ: ಸ್ಥಳೀಯವಾಗಿ ಸಿಐಡಿ ಅಧಿಕಾರಿಗಳಿಗೆ ಸಹಾಯ- ರಮೇಶ್ ಬಾನೋತ್