ಬೆಂಗಳೂರು: ಕಾಂಗ್ರೆಸ್ ವಿದೇಶಿ ಪಕ್ಷ. ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವವನ್ನೇ ನೀಡಬಾರದು ಎಂದು ಹೇಳಿದ್ದ ಸಿದ್ದರಾಮಯ್ಯ ಇಂದು ಅವರ ಕಾಲಡಿಗೇ ಶರಣಾಗಿದ್ದಾರೆ. ಅಧಿಕಾರಕ್ಕಾಗಿ ಯಾವಮಟ್ಟಕ್ಕಾದರೂ ಇಳಿಯುತ್ತಾರೆ. ಅವರೊಬ್ಬ ಅವಕಾಶವಾದಿ ಎಂದು ಶಾಸಕ ಜಿ.ಟಿ.ದೇವೇಗೌಡ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಉನ್ನತ ನಾಯಕರ ಸಮಿತಿ ಸಭೆಯ ನಂತರ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷವನ್ನು ‘ಸೀಮೆಎಣ್ಣೆ’ ಪಕ್ಷ ಎಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಆ ಪಕ್ಷದಲ್ಲಿದ್ದಾರೆಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಭಾರಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ಬೇರೆ ಪಕ್ಷದ ಶಾಸಕರು, ನಾಯಕರನ್ನು ಪಕ್ಷಕ್ಕೆ ಸೆಳೆಯುವ ಯಾವ ನಾಯಕರನ್ನೂ ನೋಡಿಲ್ಲ. ಅವರು ಎಷ್ಟೇ ಪ್ರಯತ್ನ ಮಾಡಿದರೂ ಜೆಡಿಎಸ್ ನ ಒಬ್ಬ ಶಾಸಕರನ್ನೂ ಸೆಳೆಯಲು ಸಾಧ್ಯವಿಲ್ಲ ಎಂದರು.
ಕುಮಾರಸ್ವಾಮಿ ಅವರನ್ನು ಸಿಎಂ ಹುದ್ದೆಯಿಂದ ಕೆಳಗೆ ಇಳಿಸಿದ್ದು ಯಾರು? ಯಾರ ಜೊತೆಗೆ ನೀವು ಸೇರಿಕೊಂಡ್ರಿ? ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಅವರ ಜೊತೆಗೆ ಸೇರಿರಲಿಲ್ಲವಾ? 1983ರಲ್ಲಿ ನಿಮ್ಮನ್ನ ಗೆಲ್ಲಿಸಿದ ಸಮುದಾಯ ಯಾವುದು? ಗೆಲ್ಲಿಸಿದವರ ಹೆಸರನ್ನೂ ನೀವು ಹೇಳಲಿಲ್ಲ, ನೆನಪು ಸಹ ಮಾಡಿಕೊಂಡಿಲ್ಲ. ನೀವು ಯಾರಿಗೂ ಅಗೌರವ ತೋರಿಸಬೇಡಿ ಎಂದು ಗುಡುಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೂ ತಲಾ 25 ಕೋಟಿ ರೂ. ಅನುದಾನ ನೀಡಿದ್ದರು. ಆದರೆ, ಸಿದ್ದರಾಮಯ್ಯ ವಿರೋಧ ಪಕ್ಷದ ಶಾಸಕರನ್ನು ಕಡೆಗಣಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರಕ್ಕೆ ಸರ್ಕಾರದ ಆರ್ಥಿಕ ಪರಿಸ್ಥಿತಿ ನಲುಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದಿದ್ದರೆ ಪಂಚರತ್ನದ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುತ್ತಿತ್ತು ಎಂದು ಹೇಳಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.