ಮನೆ ರಾಜಕೀಯ ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಸಿದ್ದರಾಮಯ್ಯ ಅವರಿಗೆ ಮನೆದೇವರ ಎಚ್ಚರಿಕೆ

ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಸಿದ್ದರಾಮಯ್ಯ ಅವರಿಗೆ ಮನೆದೇವರ ಎಚ್ಚರಿಕೆ

0

ಮಂಡ್ಯ(Mandya): ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಣೆ ಮಾಡಿದ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಈ ಮಧ್ಯೆ ಸಿದ್ದರಾಮಯ್ಯ ಅವರ ಮನೆ ದೇವರು ನುಡಿದಿರುವ ಭವಿಷ್ಯ ಮತ್ತಷ್ಟು ಕುತೂಹಲವನ್ನು ಸೃಷ್ಟಿಸಿದೆ.

ಮಂಡ್ಯದ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿಯಲ್ಲಿರುವ ಚಿಕ್ಕಮ್ಮ, ಸಿದ್ದರಾಮಯ್ಯನವರ ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದೆ. ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ ನೀಡಿದ್ದಾಳೆ.

ಚಿಕ್ಕಮ್ಮ ತಾಯಿ ದೇವಾಲಯಕ್ಕೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪಕ್ಷದ ಮುಖಂಡರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ಮೇಲೆ ದೇಗುಲದ ಅರ್ಚಕ ಲಿಂಗಣ್ಣನ ಮೇಲೆ ಶಕ್ತಿ ದೇವತೆ ಆವಾಹನೆಯಾಗುತ್ತೆ. ಈ ವೇಳೆ ಶಕ್ತಿ ದೇವತೆ ಭವಿಷ್ಯ ನುಡಿದಿದೆ. ಒಂದೇ ಕಡೆ ನಿಂತ್ರೆ ಗೆಲುವು ಕಷ್ಟ ಪ್ರಬಲ ಶಕ್ತಿಗಳ ವಿರೋಧವಿಧೆ. ಎರಡು ಕಡೆ ಬಾಹುಬಲ ಚಾಚಬೇಕು ಎರಡು ಭುಜಬಲದಲ್ಲಿ ನಿಲ್ಲಬೇಕೆಂದು ಭವಿಷ್ಯ ನುಡಿದಿದೆ. ಅಷ್ಟೇ ಅಲ್ಲ ಒಂದೇ ಕಡೆ ನಿಂತ್ರೆ ರಾಜಕೀಯ ಭವಿಷ್ಯಕ್ಕೆ ಕುತ್ತು ಅಂತಾ ಸಿದ್ದರಾಮಯ್ಯರನ್ನು ಎಚ್ಚರಿಸಿದೆ. ನಾನು ನಿಮ್ಮ ಮನೆ ಮೂಲ ದೇವರು, ಅವಕಾಶ ಸಿಕ್ಕಿದರೆ, ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು ಎಂದು ಹೇಳಿದೆ.

ಸದ್ಯ ಕೋಲಾರವನ್ನು ಆಯ್ಕೆ ಮಾಡಿಕೊಂಡಿರುವ ಸಿದ್ದರಾಮಯ್ಯಗೆ ಎರಡನೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವುದು ಸುಲಭದ ಮಾತಲ್ಲ. ಯಾಕಂದ್ರೆ ಕೋಲಾರ ಕ್ಷೇತ್ರವನ್ನೇ ಅಳೆದು ತೂಗಿ ಫೈನಲ್ ಮಾಡಿದ್ದಾರೆ. ಇದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಬೇಕು ಅಂತಾ ವಿರೋಧಿ ಬಣ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ ಅನ್ನೋ ಮಾತಿದೆ. ಹೀಗಾಗಿ ಮನೆ ದೇವರ ಸೂಚನೆಯಂತೆ ಮತ್ತೊಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರಾ ಅನ್ನೋದೇ ಸದ್ಯದ ಕುತೂಹಲ.

ಹಿಂದಿನ ಲೇಖನಮಂಗಳೂರು ಗಾಂಜಾ ಮಾರಾಟ ಪ್ರಕರಣ: ಮತ್ತಿಬ್ಬರು ವೈದ್ಯರ ಬಂಧನ
ಮುಂದಿನ ಲೇಖನಸಾಲಗಾರರ ಕಾಟ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬ