ಮನೆ ರಾಜಕೀಯ ಸಿದ್ದರಾಮಯ್ಯ ಅವರ ಹೇಳಿಕೆ ಚುನಾವಣೆ ಗಿಮಿಕ್: ಶೋಭಾ ಕರಂದ್ಲಾಜೆ ಟೀಕೆ

ಸಿದ್ದರಾಮಯ್ಯ ಅವರ ಹೇಳಿಕೆ ಚುನಾವಣೆ ಗಿಮಿಕ್: ಶೋಭಾ ಕರಂದ್ಲಾಜೆ ಟೀಕೆ

0

ಮೈಸೂರು(Mysuru): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಲ್ಲಾ ಹೇಳಿಕೆಗಳು ಚುನಾವಣೆ ಗಿಮಿಕ್ಸ್ ಆಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಅವರಿಗೆ ಸಿಎಂ ಸ್ಥಾನ ಸಿಗುವುದು ಒಂದು ರೀತಿಯಲ್ಲಿ ಮನೆ ಮುಂದೆ ನಾಳೆ ಬಾ ಎಂಬ ಬೋರ್ಡ್ ಹಾಕಿದಂತೆ  ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರ ಗೋಮುಖ ವ್ಯಾಘ್ರತನ, ಇಬ್ಭಗೆ ನೀತಿ ಬಗ್ಗೆ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಅವರ ಅಧಿಕಾರಾವಧಿಯಲ್ಲಿ ಏನನ್ನೂ ಮಾಡಲಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈಗ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆಂದು ಹೇಳಿದರು.

ಸಿದ್ದರಾಮಯ್ಯನವರು ಐದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಲಿಂಗಾಯುತರನ್ನು, ಹಿಂದುಳಿದ ಜಾತಿಯವರನ್ನು ಒಡೆದಿರುವುದು ಅವರ ಅಭಿವೃದ್ಧಿ ಕಾರ್ಯವಾಗಿದ್ದು, ಮುಂದೆ ಏನನ್ನೋ ಮಾಡುತ್ತೇನೆ ಎಂದು ಹೇಳುತ್ತಿರುವುದು ಕೇವಲ ಸುಳ್ಳು ಭರವಸೆ ಎಂದು ಟೀಕಿಸಿದರು.

ದೇಶದಲ್ಲಿ ಸದ್ಯಕ್ಕೆ ರಸಗೊಬ್ಬರದ ಯಾವುದೇ ಸಮಸ್ಯೆ ಇಲ್ಲ. ಕೆಲವೆಡೆ ಮಾತ್ರ ರಸ ಗೊಬ್ಬರದ ಕೊರತೆ ಬಗ್ಗೆ ಮಾಹಿತಿ ಇದೆ. ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ರಸಗೊಬ್ಬರ ಪೂರೈಕೆಯಲ್ಲಿ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲೇ ರಸಗೊಬ್ಬರ ಉತ್ಪಾದನೆಗೆ ಕ್ರಮ ಕೈಗೊಳ್ಳುತ್ತೇವೆ. ಮುಂಗಾರು ಆರಂಭ ಹಿನ್ನೆಲೆ ರಸಗೊಬ್ಬರ, ಬಿತ್ತನೆ ಬೀಜಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ ಎಂದು ತಿಳಿಸಿದರು.

ಹಿಂದಿನ ಲೇಖನಭಗತ್ ಸಿಂಗ್, ನಾರಾಯಣಗುರು ಪಠ್ಯ ಕೈಬಿಟ್ಟಿಲ್ಲ‌: ಪ್ರತಾಪ್‌ ಸಿಂಹ ಸ್ಪಷ್ಟನೆ
ಮುಂದಿನ ಲೇಖನಅಕ್ರಮ ಪ್ರಾರ್ಥನಾ ಮಂದಿರ: ಸಮೀಕ್ಷೆಗೆ ಮುಂದಾದ ಶ್ರೀರಾಮ ಸೇನೆ