ಮನೆ ರಾಜಕೀಯ ಕೋಲಾರದಲ್ಲಿ ಸಿದ್ದರಾಮಯ್ಯನವರ ಗೆಲುವು ನಿಶ್ಚಿತ: ಡಾ.ಎಚ್ ಸಿ ಮಹದೇವಪ್ಪ ವಿಶ್ವಾಸ

ಕೋಲಾರದಲ್ಲಿ ಸಿದ್ದರಾಮಯ್ಯನವರ ಗೆಲುವು ನಿಶ್ಚಿತ: ಡಾ.ಎಚ್ ಸಿ ಮಹದೇವಪ್ಪ ವಿಶ್ವಾಸ

0

ತಾಂಡವಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸಲು ಬಯಸಿದ್ದು, ಬಿಜೆಪಿಯವರು ಏನೇ ಚುನಾವಣಾ ತಂತ್ರಗಾರಿಕೆ ಮಾಡಿದರು ಅವರನ್ನು ಸೋಲಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮೈಸೂರು ಜಿಲ್ಲೆ ನಂಜನಗೂಡು ನಂಜನಗೂಡು ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರಜಾ ಧ್ವನಿ ಯಾತ್ರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರು ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ದುಡಿಯಬೇಕು ಹಾಗೂ ಉಪಚುನಾವಣೆಯಲ್ಲಿ ಯಾವ ರೀತಿ ಪಕ್ಷವನ್ನು ಗೆಲುವು ನಿಟ್ಟಿನಲ್ಲಿ ಶ್ರಮ ವಹಿಸಿದ್ದೀರಿ, ಅದೇ ರೀತಿ ಈ ಬಾರಿಯ ಚುನಾವಣೆಯಲ್ಲೂ ಸಹ ಶ್ರಮವಹಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಜಾ ಧ್ವನಿ ಯಾತ್ರಾ ಸಮಾವೇಶ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ವರುಣ ಕ್ಷೇತ್ರ ಟಿ ನರಸೀಪುರ ಕ್ಷೇತ್ರ ನಂಜನಗೂಡು ಕ್ಷೇತ್ರದಲ್ಲಿ ಸಮಾವೇಶಕ್ಕೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೀರಶೈವ ಮುಖಂಡ ಬುಲೆಟ್ ಮಹಾದೇವಪ್ಪ, ನಂಜುಂಡಸ್ವಾಮಿ, ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನೆ ಸಮಿತಿಯ ಮಾಜಿ ಅಧ್ಯಕ್ಷ ಹೆಜ್ಜೆಗೆ ಇಂಧನ ಬಾಬು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹರತಲೆ ತಮ್ಮಣ್ಣೇಗೌಡ, ಮಾಜಿ ಸದಸ್ಯ ಮೂಗು ಶೆಟ್ಟಿ, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಚಾಮರಾಜು ಮುಖಂಡರಾದ ಕೆ ಬಿ ಸ್ವಾಮಿ ಚೋಳರಾಜು, ಯಡಿಯಾಲ ನಾಗರಾಜು, ತಾಲೂಕು ಕುರುಬ ಸಂಘದ ಅಧ್ಯಕ್ಷ ಕೆಂಪಣ್ಣ, ಬಸವಗೌಡ ಶಿವಮಲ್ಲು, ಮಹದೇವಮೂರ್ತಿ, ಚನ್ನ ನಾಯಕ ಉಪಸ್ಥಿತರಿದ್ದರು.

ಹಿಂದಿನ ಲೇಖನಮೇಲಾಧಿಕಾರಿಗಳ ಕಿರುಕುಳ ಸಹಿಸದ ಶಿಕ್ಷಕ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ
ಮುಂದಿನ ಲೇಖನಸಂಚಾರ ನಿಯಮ ಉಲ್ಲಂಘನೆ: ಮೈಸೂರಿನಲ್ಲಿ 12.30 ಕೋಟಿ ದಂಡ ಪಾವತಿ