ಮನೆ ರಾಷ್ಟ್ರೀಯ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಶೂಟರ್‌ ನ ಬಂಧಿಸಿದ ಪೊಲೀಸರು

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಶೂಟರ್‌ ನ ಬಂಧಿಸಿದ ಪೊಲೀಸರು

0

ಪುಣೆ (Pune): ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೂಟರ್‌ ವೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಶೂಟರ್‌ ಸಂತೋಷ್‌ ಜಾಧವ್‌ ನನ್ನು ಪುಣೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಎಡಿಜಿಪಿ ಕುಲ್ವಂತ್‌ ಕುಮಾರ್‌ ಸರಂಗಲ್‌ ಅವರು ಬೆಳವಣಿಗೆಗಳ ಕುರಿತು ಮಾಧ್ಯಮಗಳಿಗೆ ವಿವರ ನೀಡುವ ಸಾಧ್ಯತೆ ಇದೆ. ಪುಣೆಯ ಮಂಚರ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ 2021ರ ಕೊಲೆ ಪ್ರಕರಣದಲ್ಲಿ ಜಾಧವ್‌ನನ್ನು ಬಂಧಿಸಲಾಗಿದೆ. ಆತ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯನಾಗಿದ್ದಾನೆ. ಜಾಧವ್‌ ಪತ್ತೆಗಾಗಿ ಪುಣೆ ಗ್ರಾಮಾಂತರ ಪೊಲೀಸ್‌ ಠಾಣೆಯಿಂದ ಹಲವು ತಂಡಗಳನ್ನು ಕಳೆದ ವಾರ ಗುಜರಾತ್‌ ಮತ್ತು ರಾಜಸ್ಥಾನಕ್ಕೆ ಕಳುಹಿಸಲಾಗಿತ್ತು.

ವರ್ಷದಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಜಾಧವ್‌ ಈಗ ಪೊಲೀಸರ ಕೈಗೆ ಸಿಲುಕಿದ್ದಾನೆ. ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಒಬ್ಬ ನಾಗನಾಥ್‌ ಸೂರ್ಯವಂಶಿ ಮತ್ತು ಜಾಧವ್‌ ಹೆಸರು ತನಿಖೆಯಲ್ಲಿ ಕೇಳಿ ಬಂದಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

2021ರಲ್ಲಿ ನಡೆದ ಕೊಲೆಯ ನಂತರ ಜಾಧವ್‌ಗೆ ಆಶ್ರಯ ನೀಡಿದ್ದ ಆರೋಪದ ಮೇಲೆ ಸಿದ್ದೇಶ್‌ ಕಾಂಬ್ಳೆ ಅಲಿಯಾಸ್‌ ಮಹಾಕಾಲ್ ಎಂಬುವವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆತನೂ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯನಾಗಿದ್ದಾನೆ.

ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಮಹಾಕಾಲ್‌ನನ್ನು ದೆಹಲಿ ಪೊಲೀಸರು ಹಾಗೂ ಪಂಜಾಬ್‌ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ನಟ ಸಲ್ಮಾನ್‌ ಖಾನ್‌ ಮತ್ತು ಅವರ ತಂದೆ ಸಲೀಂ ಖಾನ್‌ ಅವರಿಗೆ ಜೀವ ಬೆದರಿಕೆ ಪತ್ರ ಬರೆದಿರುವ ಪ್ರಕರಣದಲ್ಲಿ ಮುಂಬೈ ಪೊಲೀಸರು ಆತನ ತೀವ್ರ ವಿಚಾರಣೆ ನಡೆಸಿದ್ದಾರೆ.

ಹಿಂದಿನ ಲೇಖನವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ
ಮುಂದಿನ ಲೇಖನಭಾರತೀಯ ನೌಕಾಪಡೆಯಲ್ಲಿ 338 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ