ಮನೆ ಅಪರಾಧ ಕಾಲೇಜಿಗೆ ಹೋಗು ಎಂದು ಬೈದಿದ್ದಕ್ಕೆ ಬಾವಿಗೆ ಹಾರಿದ ತಂಗಿ: ಕಾಪಾಡಲು ಹೋದ ಅಣ್ಣನು ನೀರು ಪಾಲು

ಕಾಲೇಜಿಗೆ ಹೋಗು ಎಂದು ಬೈದಿದ್ದಕ್ಕೆ ಬಾವಿಗೆ ಹಾರಿದ ತಂಗಿ: ಕಾಪಾಡಲು ಹೋದ ಅಣ್ಣನು ನೀರು ಪಾಲು

0

ಕಲಬುರಗಿ: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು, ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ  ನಡೆದಿದೆ.

ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​

ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದ. ಇಷ್ಟಕ್ಕೇ ನೊಂದಿಕೊಂಡ ನಂದಿನಿ ಮನೆ ಬಳಿಯಿದ್ದ ಬಾವಿಗೆ ಹಾರಿದ್ದಾಳೆ. ತಂಗಿ ಬಾವಿಗೆ ಜಿಗಿದಿದ್ದು ತಿಳಿಯುತ್ತಿದ್ದಂತೆ ತಂಗಿ ಕಾಪಾಡಲು ಸಂದೀಪ್ ಕೂಡ ಬಾವಿಗೆ ಹಾರಿದ್ದಾನೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ. ಬಾವಿಯ ದಡದಲ್ಲಿ ನಂದಿನಿ ತಲೆಗೆ ಹೂವಿನ ಗೊಂಚಲು ಮುಡಿದುಕೊಂಡನ್ನು ಗಮನಿಸಿದ ಹೆತ್ತವರು ಅನುಮಾನಗೊಂಡು ಕಾರ್ಯಾಚರಣೆ ನಡೆಸಿದ ನಂತರ ಬಾವಿಯಲ್ಲಿ ಅಣ್ಣ ತಂಗಿಯ ಶವ ಪತ್ತೆಯಾಗಿದೆ.

ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಡಾ.ಬಿ.ಆರ್​.ಅಂಬೇಡ್ಕರ್​ ನಾಮಫಲಕ ಅಳವಡಿಸುವ ವಿಚಾರಕ್ಕೆ ಎರಡು ಗುಂಪುಗಳ ಘರ್ಷಣೆ: ಕಲ್ಲು ತೂರಾಟ, 30ಕ್ಕೂ ಹೆಚ್ಚು ವಾಹನಗಳು ಜಖಂ
ಮುಂದಿನ ಲೇಖನಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಯತ್ನಿಸಿದ ಪ್ರಿಯಕರ