ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರ ರಚಿಸಿರುವ ಎಸ್ಐಟಿ ತನಿಖೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತಿಲ್ಲ ಮತ್ತು ಸಂತ್ರಸ್ತೆಯರಿಗೆ ರಕ್ಷಣೆ ಸಿಗುತ್ತಿಲ್ಲ, ಇದರ ಜೊತೆಗೆ ಪ್ರಕರಣದಲ್ಲಿ ಡಿ ಕೆ ಶಿವಕುಮಾರ ಪಾತ್ರ ಇರೋದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಹಾಗಾಗಿ ಅವರ ರಾಜೀನಾಮೆ ಆಗ್ರಹಿಸಿ ಮತ್ತು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದರು.
ನಗರದಲ್ಲಿಂದು ಮಾತಾಡಿದ ಅವರು ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿದೆ, ಅಧಿಕಾರಿಗಳಿಗೆ ಸಂತ್ರಸ್ತೆಯರ ಬಗ್ಗೆ ಕಾಳಜಿ ಇಲ್ಲ, ಪೆನ್ ಡ್ರೈವ್ ಗಳನ್ನು ಕಾರ್ತೀಕ್ ಮೂಲಕ ಶಿವಕುಮಾರ್ ಮಾಡಿಸಿದರೆಂದು ಎಲ್ ಅರ್ ಶಿವರಾಮೇಗೌಡ ಅವರು ದೆವರಾಜೇಗೌಡರಿಂದ ಹೇಳಿಸಿದ್ದಾರೆ ಎಂದರು.
ಪೆನ್ ಡ್ರೈವ್ ಗಳನ್ನು ತಯಾರಿಸಲು ಚೆನೈಯಿಂದ ಮೂರು ಕೋಟಿ ರೂ. ವೆಚ್ಚದಲ್ಲಿ ಒಂದು ಯಂತ್ರವನ್ನು ತಯಾರಿಸಲಾಗಿದೆ ಎಂದು ಹೇಳುವ ದೇವೇಗೌಡರು, ಪೆನ್ ಡ್ರೈವ್, ವಿಡಿಯೋಗಳನ್ನು ಒಮ್ಮೆ ಆಸ್ಟ್ರೇಲಿಯಾದಲ್ಲಿ ತಯಾರಿಸಲಾಗಿದೆ ಅನ್ನುತ್ತಾರೆ ಮತ್ತೊಮ್ಮೆ ಮಲೇಷ್ಯಾದಲ್ಲಿ ತಯಾರಿಸಲಾಗಿದೆ ಅನ್ನುತ್ತಾರೆ. ಎಸ್ ಐಟಿ ಅಧಿಕಾರಿಗಳು ವಿದೇಶದ ಮಾತು ಹಾಗಿರಲಿ, ಚೆನೈಗೂ ಹೋಗುವುದು ಸಾಧ್ಯವಿರದ ಕಾರಣ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ದೇವೇಗೌಡ ಹೇಳಿದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.