ಮನೆ ಅಪರಾಧ ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ

ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ

0

ಕಾರವಾರ: ಮತಾಂತರ ಮಾಡಲು ಯತ್ನಿಸಿದ ಆರು ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಗಳ ಮನೆ ಗ್ರಾಮದಲ್ಲಿ ಬುಧವಾರ ಬಂಧಿಸಲಾಗಿದೆ.

ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ಬಂದಿದ್ದ ತಂಡ, ಆರ್ಥಿಕ ಪರಿಸ್ಥಿತಿ ಹಾಗೂ ಆರೋಗ್ಯ ಸರಿ ಆಗಬೇಕಾದರೆ ಕ್ರೈಸ್ತ ಧರ್ಮ ಸ್ವೀಕಾರ ಮಾಡಿ ಎಂದು ಮನವೊಲಿಸಲು ಮುಂದಾಗಿತ್ತು. ಏಸು ಕ್ರಿಸ್ತ ನಿಮಗೆ ಎಲ್ಲವನ್ನೂ ಕೊಡುತ್ತಾನೆ. ನಿಮ್ಮ ಎಲ್ಲ ಕಷ್ಟಗಳು ದೂರ ಆಗುತ್ತವೆ. ನಾವು ಕೂಡ ಮತಾಂತರ ಆಗಿದ್ದೇವೆ ಎಂದು ಮನವೊಲಿಸಲು ಆರು ಮಂದಿಯ ತಂಡ ಮುಂದಾಗಿತ್ತು.

ಮತಾಂತರ ಯತ್ನ ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಆದರ್ಶ ನಾಯ್ಕ ಅವರು ಶಿರಸಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಬಂಧಿತ ಆರು ಮಂದಿಯ ಪೈಕಿ ನಾಲ್ವರು ಹಾವೇರಿ ಜಿಲ್ಲೆಯವರಾಗಿದ್ದಾರೆ.

ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಬಂಧಿತರು. ಇವರ ಪೈಕಿ ಇಬ್ಬರು ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ತಾಲೂಕಿನವರಾಗಿದ್ದಾರೆ.

ಸದ್ಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಹಿಂದಿನ ಲೇಖನಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ
ಮುಂದಿನ ಲೇಖನಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ