ಕಾರವಾರ: ಮತಾಂತರ ಮಾಡಲು ಯತ್ನಿಸಿದ ಆರು ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಗಳ ಮನೆ ಗ್ರಾಮದಲ್ಲಿ ಬುಧವಾರ ಬಂಧಿಸಲಾಗಿದೆ.
ಗ್ರಾಮದ ಆದರ್ಶ ನಾಯ್ಕ ಎಂಬವರ ಮನೆಗೆ ಬಂದಿದ್ದ ತಂಡ, ಆರ್ಥಿಕ ಪರಿಸ್ಥಿತಿ ಹಾಗೂ ಆರೋಗ್ಯ ಸರಿ ಆಗಬೇಕಾದರೆ ಕ್ರೈಸ್ತ ಧರ್ಮ ಸ್ವೀಕಾರ ಮಾಡಿ ಎಂದು ಮನವೊಲಿಸಲು ಮುಂದಾಗಿತ್ತು. ಏಸು ಕ್ರಿಸ್ತ ನಿಮಗೆ ಎಲ್ಲವನ್ನೂ ಕೊಡುತ್ತಾನೆ. ನಿಮ್ಮ ಎಲ್ಲ ಕಷ್ಟಗಳು ದೂರ ಆಗುತ್ತವೆ. ನಾವು ಕೂಡ ಮತಾಂತರ ಆಗಿದ್ದೇವೆ ಎಂದು ಮನವೊಲಿಸಲು ಆರು ಮಂದಿಯ ತಂಡ ಮುಂದಾಗಿತ್ತು.
ಮತಾಂತರ ಯತ್ನ ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಆದರ್ಶ ನಾಯ್ಕ ಅವರು ಶಿರಸಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಬಂಧಿತ ಆರು ಮಂದಿಯ ಪೈಕಿ ನಾಲ್ವರು ಹಾವೇರಿ ಜಿಲ್ಲೆಯವರಾಗಿದ್ದಾರೆ.
ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಬಂಧಿತರು. ಇವರ ಪೈಕಿ ಇಬ್ಬರು ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ತಾಲೂಕಿನವರಾಗಿದ್ದಾರೆ.
ಸದ್ಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.