ಮನೆ ರಾಜ್ಯ ಬಕ್ರೀದ್‌ ಹಬ್ಬಕ್ಕೆ ಜಾನುವಾರುಗಳನ್ನು ಬಲಿ ಕೊಡದಿರಿ: ಸಚಿವ ಪ್ರಭು ಚವ್ಹಾಣ

ಬಕ್ರೀದ್‌ ಹಬ್ಬಕ್ಕೆ ಜಾನುವಾರುಗಳನ್ನು ಬಲಿ ಕೊಡದಿರಿ: ಸಚಿವ ಪ್ರಭು ಚವ್ಹಾಣ

0

ಬೆಂಗಳೂರು (Bengaluru): ಬಕ್ರೀದ್ ಹಬ್ಬದ ಸಮಯದಲ್ಲಿ ಜಾನುವಾರುಗಳನ್ನು ಬಲಿ ನೀಡಬಾರದು ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ ಸೂಚಿಸಿದ್ದಾರೆ.

ಗೋಹತ್ಯೆ ನಿಷೇಧ ಕಾನೂನು ಪಾಲಿಸಬೇಕು. ಗೋಹತ್ಯೆ ತಡೆಗೆ ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಸೂಚಿಸಿರುವುದಲ್ಲದೆ, ಹೊರ ರಾಜ್ಯಗಳಿಂದ ಅಕ್ರಮವಾಗಿ ಗೋವುಗಳು, ಗೋಮಾಂಸ ಸಾಗಣೆ ಮಾಡುವವರ ಮೇಲೆ ಹದ್ದಿನ ಕಣ್ಣಿಡ ಬೇಕು. ಗೋಹತ್ಯೆ ತಡೆಗಟ್ಟುವಲ್ಲಿ ಸಕ್ರಿಯರಾಗಿರಬೇಕು ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಗೆ ಸೂಚಿಸಿದ್ದಾರೆ.

ಬಕ್ರೀದ್‌ಗೆ ಗೋವು, ಹಸು, ಎತ್ತು,‌ ಕರು, ಒಂಟೆಗಳನ್ನು ಬಲಿ ಕೊಡುವ ಸಂಪ್ರದಾಯವಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸಬೇಕು. ಹಬ್ಬದ ಸಮಯದಲ್ಲಿ ಗೋಹತ್ಯೆ ತಡೆಯಲು ಕಾರ್ಯಪಡೆ ನೇಮಕ ಮಾಡಲಾಗಿದೆ. ಗೋಹತ್ಯೆ ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ ದಾಖಲಿಸಬೇಕು. ತಡೆಯದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಾರ್ವಜನಿಕರೂ ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನರಾಜ್ಯದ ಹಲವೆಡೆ ಭಾರಿ ಮಳೆ: ಕರಾವಳಿಯಲ್ಲಿ ʻರೆಡ್‌ ಅಲರ್ಟ್‌ʼ ಘೋಷಣೆ