ಮನೆ ರಾಜಕೀಯ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಸಿದ್ರಾಮಣ್ಣನ ಪರ ಪ್ರಚಾರಕ್ಕೆ ಇಳಿದ ಶಿವಣ್ಣ:...

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಸಿದ್ರಾಮಣ್ಣನ ಪರ ಪ್ರಚಾರಕ್ಕೆ ಇಳಿದ ಶಿವಣ್ಣ: ಪ್ರತಾಪ್ ಸಿಂಹ ಟಾಂಗ್

0

ಮೈಸೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ನಟ ಶಿವರಾಜ್ ಪ್ರಚಾರ ನಡೆಸುತ್ತಿರುವುದಕ್ಕೆ ಸಂಸದ ಪ್ರತಾಪ್ ಸಿಂಹ ಅವರು ಟ್ವಿಟರ್ ಹಾಗೂ ಫೇಸ್ಬುಕ್ ನಲ್ಲಿ ಟಾಂಗ್ ನೀಡಿದ್ದಾರೆ.

Join Our Whatsapp Group

ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಚಿವ ಸೋಮಣ್ಣ ಅವರು ಆಸ್ಪತ್ರೆ ಕಟ್ಟಿಸಿದ್ದಾರೆ. ಈ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ರಾಜ್ ಕುಮಾರ್, ಸೋಮಣ್ಣರ ಕಾರ್ಯವನ್ನು ಶ್ಲಾಘಿಸಿದ್ದರು. ಇದನ್ನೇ ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಅವರು ಶಿವರಾಜ್ ಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

“ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನ ಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣನ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ! ಅವರವರ ಭಾವ ಭಕುತಿಗೆ” ಎಂದು ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿ ಸೋಮಣ್ಣ ಅವರನ್ನು ರಾಘಣ್ಣ ಹೊಗಳಿದ ವಿಡಿಯೋ ಹಾಗೂ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಪ್ರಚಾರಕ್ಕೆ ಬಂದರೆ ತಕರಾರಿಲ್ಲ

ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ಗೀತಾ ಸ್ಪರ್ಧೆ ಮಾಡಿದ್ದರು. ಆಗಲೂ ನಟ ಶಿವರಾಜ್ ಕುಮಾರ್ ಪ್ರಚಾರಕ್ಕೆ ಹೋಗಿರಲಿಲ್ಲ. ಡಾ.ರಾಜ್ ಕುಟುಂಬವನ್ನು ರಾಜಕೀಯದ ಆಚೆಗೆ ನೋಡುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಸ್ಪರ್ಧಿಸಿದಾಗಲೂ ಸರಿ ಕಾಣಲಿಲ್ಲ. ಬಿಜೆಪಿ ಸಂಸದನಾಗಿ ಈ ವಿಚಾರವನ್ನು ಹೇಳುತ್ತಿಲ್ಲ. ಗೀತಾ ಶಿವರಾಜ್ ಕುಮಾರ್ ರಾಜಕೀಯ ಕುಟುಂಬದಿಂದ ಬಂದಿದ್ದು. ಅವರ ತಂದೆ ಎಸ್.ಬಂಗಾರಪ್ಪ ಕರ್ನಾಟಕದ ಸಿಎಂ ಆಗಿದ್ದವರು. ಗೀತಾ ಶಿವರಾಜ್ ಕುಮಾರ್ ಪ್ರಚಾರಕ್ಕೆ ಬಂದರೆ ತಕರಾರು ಇಲ್ಲ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಹಿಂದಿನ ಲೇಖನಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಮುಂದಿನ ಲೇಖನಹೊನ್ನಾವರ: ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆದ ಹೆಲಿಪ್ಯಾಡ್ ಬಳಿ ಬೆಂಕಿ