ಮನೆ ಅಪರಾಧ ಗಂಡ-ಹೆಂಡತಿ ಜಗಳ: ಸುತ್ತಿಗೆಯಿಂದ ಹೊಡೆದು ಅತ್ತೆಯನ್ನು ಕೊಂದ ಅಳಿಯ

ಗಂಡ-ಹೆಂಡತಿ ಜಗಳ: ಸುತ್ತಿಗೆಯಿಂದ ಹೊಡೆದು ಅತ್ತೆಯನ್ನು ಕೊಂದ ಅಳಿಯ

0

ಬೆಂಗಳೂರು(Bengaluru): ಕುಡಿದ ಅಮಲಿನಲ್ಲಿ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಾರತ್ ಹಳ್ಳಿಯ ಸಂಜಯನಗರದಲ್ಲಿ ನಡೆದಿದೆ.

ನಿವಾಸಿ ಸೌಭಾಗ್ಯ ಕೊಲೆಯಾದ ಮಹಿಳೆ. ಆರೋಪಿ ನಾಗರಾಜ(35) ನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.

ಕಳೆದ‌ 6 ವರ್ಷದ ಹಿಂದೆ ನಾಗರಾಜ್ ಮತ್ತು ಭವ್ಯಶ್ರೀ ಮದುವೆಯಾಗಿತ್ತು.‌ ಇವರಿಗೆ 5 ವರ್ಷದ ಮಗುವಿದೆ. ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ದಾಸನಾಗಿದ್ದ. ಹಾಗಾಗಿ ಆಗಾಗ ಮನೆಯಲ್ಲಿ ಗಲಾಟೆ ಆಗುತ್ತಿತ್ತು. ಗಂಡನ ಕಾಟ ತಾಳಲಾರದೆ ಮೂರು ವರ್ಷಗಳಿಂದ ಸಂಜಯನಗರ ತಾಯಿ ಮನೆಗೆ ಭವಶ್ರೀ ಬಂದಿದ್ದಳು. ಈ ಮಧ್ಯೆ ವಿಚ್ಛೇದನಕ್ಕಾಗಿ ತಯಾರಿ ನಡೆಯುತ್ತಿತ್ತು.‌

ಈ ನಡುವೆ ಕುಡಿದ ಅಮಲಿನಲ್ಲಿದ್ದ ನಾಗರಾಜನಿ ಪತ್ನಿ ಇದ್ದ ಮನೆಗೆ ಜುಲೈ 12ರಂದು ಆಗಮಿಸಿ ಗಲಾಟೆ ಮಾಡಿ, ಹೆಂಡತಿಯನ್ನು ತನ್ನೊಟ್ಟಿಗೆ ಕಳುಹಿಸಿಕೊಡುವಂತೆ ಒತ್ತಾಯಿಸಿದ್ದ. ಈ ವೇಳೆ ಅತ್ತೆ ಸೌಭಾಗ್ಯ ಬುದ್ಧಿ ಹೇಳಿ ಕಳಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ನಾಗರಾಜ್, ಅತ್ತೆಗೆ ಬುದ್ಧಿ ಕಲಿಸಲು ತೀರ್ಮಾನಿಸಿದ್ದ. ಜುಲೈ 13 ರಂದು ಸಂಜೆ ಕಂಠಪೂರ್ತಿ ಕುಡಿದು ಸಂಜಯನಗರದಲ್ಲಿ ಸೊಪ್ಪು ವ್ಯಾಪಾರ ಮಾಡುತ್ತಿದ್ದ ಅತ್ತೆಗೆ ಸುತ್ತಿಗೆಯಿಂದ ಐದಾರು ಹೊಡೆದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಅತ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು.

ಘಟನೆ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ನಾಗರಾಜ್​ನನ್ನ ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ, ನನ್ನ ಅತ್ತೆಯನ್ನು ಕೊಲ್ಲುವ ಉದ್ದೇಶ ಇರಲಿಲ್ಲ. ನನ್ನ ಹೆಂಡತಿಯನ್ನು ಕೊಲ್ಲುವುದಕ್ಕೆ ಪ್ಲಾನ್ ಮಾಡಿಕೊಂಡಿದ್ದೆ. ಆದರೆ ಕುಡಿದ ಮತ್ತಿನಲ್ಲಿ ಯಾರು ಅನ್ನೋದೆ ಗೊತ್ತಾಗಿಲ್ಲ. ಹೆಂಡತಿ ಅಂತಾ ಅತ್ತೆಗೆ ಹೊಡೆದುಬಿಟ್ಟೆ ಎಂದು ಆರೋಪಿ ಅಳಲು ತೋಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಕರ್ನಾಟಕ ಜಾನಪದ ವಿವಿ ಕುಲಪತಿ ಪತ್ನಿ ಎಚ್‌.ಕೆ. ಚೈತ್ರಾ ಆತ್ಮಹತ್ಯೆ
ಮುಂದಿನ ಲೇಖನಮಾಹಿತಿ ನೀಡದಿರುವುದಕ್ಕೆ ಸಕಾರಣವಿದ್ದಾಗ ಪಿಐಒಗೆ ದಂಡ ವಿಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್‌