ಮನೆ ಅಪರಾಧ ಅಡುಗೆ ಮಾಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಅಡುಗೆ ಮಾಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

0

ಮೈಸೂರು: ಮನೆಯಲ್ಲಿ ಅಡುಗೆ ಮಾಡಿಲ್ಲ ಎಂದು ಕೋಪಗೊಂಡ ಮಗ ತಾಯಿಗೆ ಕಪಾಳಕ್ಕೆ ಹೊಡೆದಿದ್ದು, ಆಕೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬಿಳಿಕೆರೆಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಜಯಮ್ಮ (54) ಮೃತಪಟ್ಟ ಮಹಿಳೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಜಯಮ್ಮ ಮದ್ಯ ವ್ಯಸನಿಯಾಗಿದ್ದು, ಇದೇ ವಿಚಾರವಾಗಿ ಮನೆಯಲ್ಲಿ ಮಕ್ಕಳ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಶನಿವಾರ ಸಹ ಹಗಲಿನಲ್ಲೇ ಜಯಮ್ಮ ಮದ್ಯೆ ಸೇವಿಸಿ ಅಡುಗೆ ಸಹ ಮಾಡಿಲ್ಲ ಎನ್ನಲಾಗಿದೆ. ಚಾಲಕನಾಗಿರುವ ಮಗ ಹರೀಶ್ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಾಗ ತಾಯಿ‌ ಅಡುಗೆ ಮಾಡಿರಲಿಲ್ಲ, ಇದರಿಂದ ಕೋಪಗೊಂಡ ಹರೀಶ್ ತಾಯಿಯ ಕಪಾಳಕ್ಕೆ ಹೊಡೆದಿದ್ದಾರೆ.ಕುಸಿದು ಬಿದ್ದ ಜಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

ತನ್ನ ಸಹೋದರನೇ ತಾಯಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಮೃತಳ ಪುತ್ರಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಇನ್ಸ್‌ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಹರೀಶ್‌ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಹಿಂದಿನ ಲೇಖನಪಶ್ಚಿಮ ಬಂಗಾಳ: ವಿಧಾನಸಭೆಯಲ್ಲಿ ಅಶಿಸ್ತಿನಿಂದ ವರ್ತಿಸಿದ ಬಿಜೆಪಿ ಶಾಸಕರ ಅಮಾನತು
ಮುಂದಿನ ಲೇಖನಪುತ್ರಿಯಿಂದಲೇ ತಂದೆಯ ಕೊಲೆ ಆರೋಪ