ಬೆಂಗಳೂರು: ಸೋನಿಯಾ ಗಾಂಧಿ ಅವರನ್ನು ‘ವಿಷಕನ್ಯೆ’ ಎಂದು ಕರೆಯುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿದೆ.
ರಾಜ್ಯದಲ್ಲಿನ ಬಿಜೆಪಿ ನಾಯಕರುತಮ್ಮ ಮಾನಸಿಕ ಮತ್ತು ರಾಜಕೀಯ ಸಮತೋಲನವನ್ನು ಕಳೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿದರ್ಶನದಲ್ಲಿ ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧದ ಅತ್ಯಂತ ಕೆಟ್ಟ ರೀತಿಯ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಹತಾಸೆಯಿಂದ ಬಿಜೆಪಿ ನಾಯಕರು ಕೊಳಕು ಮನಸ್ಥಿತಿಯಿಂದ ಕಾಂಗ್ರೆಸ್ ನಾಯಕರನ್ನು ಅಪಮಾನಿಸುತ್ತಿದ್ದಾರೆ. ಅವರು ರಾಜಕೀಯ ಸಮತೋಲನ ಮತ್ತು ಸಭ್ಯತೆಯನ್ನು ಕಳೆದುಕೊಂಡಿದ್ದು, ಅತ್ಯಂಕ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.
ಬಸವನಗೌಡ ಯತ್ನಾಳ್ ಹೇಳಿಕೆ ದೇಶದ ಸಂಸ್ಕೃತಿಗೆ ಧಕ್ಕೆ ತರುವಂತಹದ್ದು, ಇದು ಸೋನಿಯಾಗಾಂಧಿ ಅವರೊಬ್ಬರ ಪ್ರಶ್ನೆಯಲ್ಲ, ಇಡೀ ಸ್ತ್ರೀ ಕುಲದ ಘನತೆಯ ಪ್ರಶ್ನೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ವಿಷಪೂರಿತ ಹಾವಿಗೆ ಹೋಲಿಸಿದ ನಂತರ ಬಿಜಾಪುರ ಶಾಸಕ ಮತ್ತು ಮಾಜಿ ಸಚಿವ ಯತ್ನಾಳ್ ಅವರು ಚುನಾವಣಾ ಪ್ರಚಾರದಲ್ಲಿ ಸೋನಿಯಾ ಗಾಂಧಿ ವಿರುದ್ಧ ವಿಷಕನ್ಯೆ ಟೀಕೆ ಮಾಡಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.