ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂಧರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.
ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಧಿಕಾರಿಗಳು ವರ್ಷದ 365 ದಿನಗಳೂ ಕೆಲಸ ಮಾಡುತ್ತಾರೆ. ಹಾಗಾಗಿ ಈ ರೀತಿಯ ಕ್ರೀಡಾಕೂಟವನ್ನು ನಡೆಸುವುದರಿಂದ ಅವರ ಒತ್ತಡಗಳಿಂದ ಹೊರಬಂದು ಉತ್ತಮ ಮನಸ್ಥಿತಿ ಹೊಂದಲು ನೇರವಾಗುತ್ತದೆ ಎಂದರು.
ಚುನಾವಣೆಯ ಸಂದರ್ಭವಾದ್ದರಿಂದ ಬಹಳ ಕಡಿಮೆ ಸಮಯದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಇದರಿಂದ ಚುನಾವಣಾ ಕೆಲಸದಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಹುಮ್ಮಸಿನಿಂದ ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಆನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದು ಎಲ್ಲಾ ಅಧಿಕಾರಿಗಳು ಕೆಲಸದ ಜೊತೆಗೆ ತಮ್ಮ ವಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಬಹಳ ಮುಖ್ಯ. ಪ್ರಸ್ತುತ ಜಿಮ್ ಗೆ ಹೋಗುವವರೇ ಹೆಚ್ಚಾಗಿ ಮರಣ ಹೊಂದುತ್ತಿದ್ದಾರೆ ಎಂಬ ಋಣಾತ್ಮಕ ಮಾಹಿತಿ ಎಲ್ಲೆಡೆ ಹರಡುತ್ತಿದ್ದು, ಆ ಯೋಚನೆಯನ್ನು ಮನಸ್ಸಿನಿಂದ ತೆಗೆದುಹಾಕಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ನಾವೆಲ್ಲರೂ ಒಂದು ತಂಡವಾಗಿ ಯಾವುದೇ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಕ್ರೀಡಾಕೂಟ ಸ್ಫೂರ್ತಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ,ಎನ್ ಮಂಜೇಗೌಡ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ ಗಾಯಿತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಗೋವಿಂದರಾಜು, ಸಂಘದ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.