ಮನೆ ರಾಜ್ಯ ಇಂದಿನಿಂದ ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆ ಆರಂಭ

ಇಂದಿನಿಂದ ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆ ಆರಂಭ

0

ಬೆಂಗಳೂರು(Bengaluru): ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಆರಂಭವಾಗಿದೆ.

ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರಸಕ್ತ ಸಾಲಿನ ಎಸ್​​ಎಸ್ಎಲ್​​ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಿದ್ದು, ಶೇ. 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಈ ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

ಉಚಿತ ಬಸ್ ಸೇವೆ: ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನ ಕಲ್ಪಿಸಲಾಗಿದೆ.

ಜೂ. 27 ರಿಂದ ಜು.4 ರವರೆಗೆ ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶದ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗಳು ನಡೆಯುವ ಅವಧಿಯಲ್ಲಿ 2021- 22ನೇ ಸಾಲಿನಲ್ಲಿ ವಿತರಿಸಿರುವ ಪಾಸುಗಳನ್ನು ಬಳಸಿ ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ಪರಿಗಣಿಸಿ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಶಿಕ್ಷಣ ಸಚಿವರಿಂದ ಶುಭ ಹಾರೈಕೆ: ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಭ ಹಾರೈಸಿದ್ದಾರೆ.

ಹಿಂದಿನ ಲೇಖನಜಲ ಸಂಪನ್ಮೂಲ ಇಲಾಖೆಯಲ್ಲಿ 155 ಎಸ್ ಡಿಎ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ಮುಂದಿನ ಲೇಖನರಜೆ ಕಳೆಯಲು ಗ್ರಾಮಕ್ಕೆ ಬಂದಿದ್ದವರು ಕೃಷಿಹೊಂಡದಲ್ಲಿ ಮುಳುಗಿ ಸಾವು