ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದರು ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ರೊಚ್ಚಿಗೆದ್ದ ಎರಡೂ ಪಕ್ಷಗಳ ಕಾರ್ಯಕರ್ತರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಪಕ್ಷದಿಂದ ಗೆದ್ದಿದ್ದ ಎಸ್ ಟಿ ಸೋಮಶೇಖರ್ ರಾಜಕೀಯ ಸ್ವಾರ್ಥಕ್ಕಾಗಿ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
25 ಕೋಟಿ ರೂಪಾಯಿ ಪಡೆದ ಎಸ್ ಟಿ ಸೋಮಶೇಖರ್!
ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಗೌಡ ಅವರು; ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ವಿಧಾನಸಭೆ ಸ್ಪೀಕರ್ ಅವರು ಅನರ್ಹಗೊಳಿಸಬೇಕು. ಅಡ್ಡಮತ ಹಾಕಲಿಕ್ಕಾಗಿ ಅವರು ಕಾಂಗ್ರೆಸ್ ನಿಂದ 25 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಒಂದು ವೇಳೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸದಿದ್ದರೆ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು. ಅಲ್ಲದೆ, ನಾಳೆಯಿಂದಲೇ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಇದೇ ವೇಳೆ ಸಿಟ್ಟಿಗೆದ್ದ ಕಾರ್ಯಕರ್ತರು ಎಸ್ ಟಿ ಸೋಮಶೇಖರ್ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ನಗರ ಜೆಡಿಎಸ್ ಜಿ.ಟಿ.ರೇವಣ್ಣ, ಪರಿಶಿಷ್ಟ ವಿಭಾಗದ ವೇಲು, ಯುವ ಘಟಕದ ಯುವ ಕಾರ್ಯಾಧ್ಯಕ್ಷ ಚಂದ್ರಶೇಖರ್, ಮಾದೇಗೌಡ ಹಾಗೂ ಮತ್ತು ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.