ಶಿವಮೊಗ್ಗ: ವಿಕಸಿತ ಭಾರತಕ್ಕಾಗಿ ದೇಶಾದ್ಯಂತ ಇಂದಿನಿಂದ 3 ದಿನಗಳ ಕಾಲ ನಡೆಯುತ್ತಿರುವ “ಗ್ರಾಮ ಚಲೋ” ಅಭಿಯಾನದ ಅಂಗವಾಗಿ ಶಿವಮೊಗ್ಗದ ಜಯನಗರದಲ್ಲಿ ಅಂಬೇಡ್ಕರ್ ಶಕ್ತಿ ಕೇಂದ್ರದ , 10ನೇ ವಾರ್ಡ್ ಬೂತ್ ಪದಾಧಿಕಾರಿಗಳೊಂದಿಗೆ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ ಎಸ್ ಅರುಣ್ ಅವರು ಸಭೆ ನಡೆಸಿದರು.
ಬೂತ್ 71ರಲ್ಲಿ “2024 ಮತ್ತೊಮ್ಮೆ ಬಿಜೆಪಿ” ಗೋಡೆ ಬರಹಕ್ಕೆ ಚಾಲನೆ ನೀಡಿ, ಬೂತ್ ನ ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ತಿಳಿಸಲಾಯಿತು. ಬಿ. ವೈ ರಾಘವೇಂದ್ರ ಅವರ ಯೋಜನೆಗಳ ಕುರಿತಾಗಿ QR ಸ್ಕ್ಯಾನ್ ಮಾಡಿ ವೀಕ್ಷಿಸಲು ತಿಳಿಸಲಾಯಿತು.
ಪಕ್ಷದ ಕಾರ್ಯಕರ್ತರು ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಮೋದಿ ಜೀ ಅವರ ಸರ್ಕಾರದ ಎಲ್ಲಾ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ ಅಭಿಯಾನವನ್ನು ಯಶಸ್ವಿಗೊಳಿಸೋಣ. ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪಕ್ಕೆ ಜೊತೆಯಾಗೋಣ.
ವಾರ್ಡ್ ಅಧ್ಯಕ್ಷರಾದ ಎಸ್ ಪಿ ದಿನೇಶ್, ರಾಜೇಂದ್ರ, ವೆಂಕಟೇಶ್, ಮುರುಗನ್, ಪ್ರಜ್ವಲ್, ಯೋಗೀಶ್, ಗಣೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.