ಮನೆ ಕಾನೂನು ಅವ್ಯವಹಾರದಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಪ್ರತಾಪ್ ರೆಡ್ಡಿ

ಅವ್ಯವಹಾರದಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಪ್ರತಾಪ್ ರೆಡ್ಡಿ

0

ಬೆಂಗಳೂರು: ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಅವ್ಯವಹಾರದಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳುವುದು ಖಚಿತ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಯೇ ವ್ಯಕ್ತಿಯೊಬ್ಬನನ್ನು ಅಪಹರಿಸಿ, ಕೂಡಿಟ್ಟು ನಲವತ್ತು ಲಕ್ಷ ರೂ. ಗೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಇನ್ಫ್ಯಾಂಟ್ರಿ ರಸ್ತೆಯ ತಮ್ಮ ಕಚೇರಿಯಲ್ಲಿ ಮಾತನಾಡಿದರು.

ಬಾಗಲೂರು ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿ ಕೂಡಿ ಹಾಕಿರುವ ಆರೋಪವಿದೆ. ಪ್ರಕರಣದಲ್ಲಿ ಓರ್ವ ಪಿಎಸ್ಐ ಸಹಿತ ಮೂವರು ಸಿಬ್ಬಂದಿ ಕೈವಾಡ ಇರುವುದು ಪತ್ತೆಯಾಗಿದೆ. ಇದುವರೆಗೂ ಮೂವರ ಆರೋಪಿಗಳ ಬಂಧನವಾಗಿದ್ದು, ಪಿಎಸ್’ಐ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ತನಿಖೆ ಮುಂದುವರೆಸಲಾಗಿದೆ ಎಂದು ಹೇಳಿದರು.
ಇಲಾಖೆಯಲ್ಲಿ ಈ ರೀತಿಯ ದುರ್ವ್ಯವಹಾರದಲ್ಲಿ ತೊಡಗಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಲಾಗಿದೆ, ಮುಂದೆಯೂ ಕೂಡ ಕ್ರಮ ಕೈಗೊಳ್ಳಲಾಗುತ್ತದೆ. 99.9% ಸಿಬ್ಬಂದಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಈ ರೀತಿ ಇರುವ ಬೆರಳೆಣಿಕೆಯಷ್ಟು ಸಿಬ್ಬಂದಿಯ ವಿರುದ್ಧ ಅಮಾನತ್ತು ಮತ್ತು ಸೇವೆಯಿಂದ ವಜಾ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಪಾತ್ರವಿದ್ದಲ್ಲಿ ಅವರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಕರಣದ ವಿವರ : ಹುಲಿ ಚರ್ಮ ಮತ್ತು ಉಗುರು ಮಾರಾಟ ದಂಧೆಯಲ್ಲಿ ತೊಡಗಿದ್ದ ಎನ್ನಲಾದ ರಾಮಾಂಜಿ ಎಂಬಾತನನ್ನ ಅಪಹರಿಸಿ, ಅಕ್ರಮವಾಗಿ ಕೂಡಿಟ್ಟು ನಲವತ್ತು ಲಕ್ಷ ರೂ. ಗೆ ಡಿಮ್ಯಾಂಡ್ ಮಾಡಿದ್ದ ಆರೋಪದಡಿ ಮಾರತ್ ಹಳ್ಳಿ ಪೊಲೀಸ್​ ಠಾಣೆಯ ಪಿಎಸ್’ಐ ರಂಗೇಶ್, ಕಾನ್ಸ್​ಟೇಬಲ್ ಸಹಿತ ಮೂವರ ವಿರುದ್ಧ ಬಾಗಲೂರು ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ಈ ಕೇಸ್​ಗೆ ಸಂಬಂಧಿಸಿಂತೆ ಕಾನ್ಸ್​ ಟೇಬಲ್ ಬಂಧನವಾಗಿದ್ದು ಪಿಎಸ್‌ ಐ ರಂಗೇಶ್ ನಾಪತ್ತೆಯಾಗಿದ್ದಾರೆ.

ಹಿಂದಿನ ಲೇಖನಸುಳ್ಳುಸುದ್ದಿ ಪ್ರಜಾಪ್ರಭುತ್ವಕ್ಕೆ ಮಾರಕ; ಸಮಗ್ರ ಸತ್ಯ ಶೋಧನೆ ಕಾರ್ಯವಿಧಾನದ ಅಗತ್ಯವಿದೆ: ಸಿಜೆಐ ಚಂದ್ರಚೂಡ್
ಮುಂದಿನ ಲೇಖನಇಂದು ಸಂಜೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ: ಜಿಲ್ಲಾಧಿಕಾರಿ