ಬೆಂಗಳೂರು: ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಅವ್ಯವಹಾರದಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳುವುದು ಖಚಿತ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಯೇ ವ್ಯಕ್ತಿಯೊಬ್ಬನನ್ನು ಅಪಹರಿಸಿ, ಕೂಡಿಟ್ಟು ನಲವತ್ತು ಲಕ್ಷ ರೂ. ಗೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಇನ್ಫ್ಯಾಂಟ್ರಿ ರಸ್ತೆಯ ತಮ್ಮ ಕಚೇರಿಯಲ್ಲಿ ಮಾತನಾಡಿದರು.
ಬಾಗಲೂರು ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿ ಕೂಡಿ ಹಾಕಿರುವ ಆರೋಪವಿದೆ. ಪ್ರಕರಣದಲ್ಲಿ ಓರ್ವ ಪಿಎಸ್ಐ ಸಹಿತ ಮೂವರು ಸಿಬ್ಬಂದಿ ಕೈವಾಡ ಇರುವುದು ಪತ್ತೆಯಾಗಿದೆ. ಇದುವರೆಗೂ ಮೂವರ ಆರೋಪಿಗಳ ಬಂಧನವಾಗಿದ್ದು, ಪಿಎಸ್’ಐ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ತನಿಖೆ ಮುಂದುವರೆಸಲಾಗಿದೆ ಎಂದು ಹೇಳಿದರು.
ಇಲಾಖೆಯಲ್ಲಿ ಈ ರೀತಿಯ ದುರ್ವ್ಯವಹಾರದಲ್ಲಿ ತೊಡಗಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಲಾಗಿದೆ, ಮುಂದೆಯೂ ಕೂಡ ಕ್ರಮ ಕೈಗೊಳ್ಳಲಾಗುತ್ತದೆ. 99.9% ಸಿಬ್ಬಂದಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಈ ರೀತಿ ಇರುವ ಬೆರಳೆಣಿಕೆಯಷ್ಟು ಸಿಬ್ಬಂದಿಯ ವಿರುದ್ಧ ಅಮಾನತ್ತು ಮತ್ತು ಸೇವೆಯಿಂದ ವಜಾ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಪಾತ್ರವಿದ್ದಲ್ಲಿ ಅವರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಕರಣದ ವಿವರ : ಹುಲಿ ಚರ್ಮ ಮತ್ತು ಉಗುರು ಮಾರಾಟ ದಂಧೆಯಲ್ಲಿ ತೊಡಗಿದ್ದ ಎನ್ನಲಾದ ರಾಮಾಂಜಿ ಎಂಬಾತನನ್ನ ಅಪಹರಿಸಿ, ಅಕ್ರಮವಾಗಿ ಕೂಡಿಟ್ಟು ನಲವತ್ತು ಲಕ್ಷ ರೂ. ಗೆ ಡಿಮ್ಯಾಂಡ್ ಮಾಡಿದ್ದ ಆರೋಪದಡಿ ಮಾರತ್ ಹಳ್ಳಿ ಪೊಲೀಸ್ ಠಾಣೆಯ ಪಿಎಸ್’ಐ ರಂಗೇಶ್, ಕಾನ್ಸ್ಟೇಬಲ್ ಸಹಿತ ಮೂವರ ವಿರುದ್ಧ ಬಾಗಲೂರು ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ಈ ಕೇಸ್ಗೆ ಸಂಬಂಧಿಸಿಂತೆ ಕಾನ್ಸ್ ಟೇಬಲ್ ಬಂಧನವಾಗಿದ್ದು ಪಿಎಸ್ ಐ ರಂಗೇಶ್ ನಾಪತ್ತೆಯಾಗಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.