ಮನೆ ಅಪರಾಧ ಎಸ್ ಎಸ್ ಎಲ್ ​ಸಿ  ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ

ಎಸ್ ಎಸ್ ಎಲ್ ​ಸಿ  ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ

0

ಬೆಂಗಳೂರು: ಎಸ್ ಎಸ್ ಎಲ್ ​ಸಿ  ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಿನ್ನೆ(ಮಾ.27) ನಡೆದಿದೆ.

ನಿನ್ನೆ ಎಸ್ ಎಸ್ ಎಲ್​ ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.

ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ.

ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಿಂದಿನ ಲೇಖನಬಿಪಿಯನ್ನು ಅಳೆಯುವ ಪದ್ದತಿಗಳು
ಮುಂದಿನ ಲೇಖನವಸಿಷ್ಠ ಸಿಂಹ ನಟನೆಯ “ವಿಐಪಿ’ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆ