ಮನೆ ಸುದ್ದಿ ಜಾಲ ಬಸವಣ್ಣನವರ ತತ್ವಗಳನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತೇವೆ ಎಂಬುದರಲ್ಲಿ ಯಶಸ್ಸು ನಿಂತಿದೆ: ಸಿಎಂ ಬೊಮ್ಮಾಯಿ

ಬಸವಣ್ಣನವರ ತತ್ವಗಳನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತೇವೆ ಎಂಬುದರಲ್ಲಿ ಯಶಸ್ಸು ನಿಂತಿದೆ: ಸಿಎಂ ಬೊಮ್ಮಾಯಿ

0

ಬೆಳಗಾವಿ: ಬಸವಣ್ಣನವರ ದೊಡ್ಡ ಮೂರ್ತಿ, ದೊಡ್ಡ ಕಟ್ಟಡಗಳನ್ನು ನಾವು ಕಟ್ಟಬಹುದು. ಆದರೆ, ಅವರ ತತ್ವಗಳನ್ನು ಎಷ್ಟು ದೊಡ್ಡ ಮಟ್ಟದಲ್ಲಿ ಬೆಳೆಸುತ್ತೇವೆ, ಪಾಲಿಸುತ್ತೇವೆ ಎಂಬುದರ ಮೇಲೆ ಯಶಸ್ಸು ನಿಂತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಬುಧವಾರ ಮಹಾನಗರ ಪಾಲಿಕೆಯಿಂದ ಬಸವೇಶ್ವರರ ವೃತ್ತದಲ್ಲಿ ಆಯೋಜಿಸಿದ್ದ ಬಸವಣ್ಣನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸುತಗಟ್ಟಿ ಬಳಿ, ಘಟಪ್ರಭಾ ನದಿ ದಡದಲ್ಲಿ ಬಸವಣ್ಣನವರ 108 ಅಡಿ ಎತ್ತರದ ಪ್ರತಿಮೆ ಪ್ರತಿಷ್ಠಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಘಟಪ್ರಭಾ ನದಿ ದಡದಲ್ಲಿ ಬಸವೇಶ್ವರರ ಬೃಹತ್‌ ಪ್ರತಿಮೆ ನಿಲ್ಲಿಸಬೇಕು ಎಂಬುದು ನಾಡಿನ ಹಲವು ಶ್ರೀಗಳ ಆಶಯವಾಗಿದೆ. ಪ್ರಭಾಕರ ಕೋರೆ ಅವರೂ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು, ಪ್ರತಿಮೆ ಪ್ರತಿಷ್ಠಾಪನೆಯ ಜತೆಗೆ, ಆ ಸ್ಥಳವನ್ನು ವಿಶ್ವಮಟ್ಟದ ಪ್ರವಾಸಿ ತಾಣ ಮಾಡಲು ಕ್ರಮ ವಹಿಸುತ್ತೇನೆ ಎಂದರು.

ಬಸವಣ್ಣ ನಮ್ಮೆಲ್ಲರ ಬದುಕನ್ನು ಆವರಿಸಿಕೊಂಡಿದ್ದಾನೆ. ಬಸವಣ್ಣನ ಕೆಲಸವೆಂದರೆ ಅದು ಜನರ ಕೆಲಸವೇ ಆಗಿರುತ್ತದೆ. ಎಲ್ಲಿಯವರೆಗೆ ಕನ್ನಡ ಭಾಷೆ ಇರುತ್ತದೆಯೋ ಅಲ್ಲಿಯವರೆಗೂ ಬಸವಣ್ಣ ಮತ್ತು ಅವನ ವಚನಗಳು ಅಜರಾಮರ ಎಂದರು.

ನಿಡಸೋಸಿ ಸಿದ್ಧ ಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಗದಗ– ಡಂಬಳ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕೆಎಲ್‌’ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಶಾಸಕ ಅಭಯ ಪಾಟೀಲ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಅನಿಲ ಬೆನಕೆ, ದುರ್ಯೋಧನ ಐಹೊಳೆ, ಚನ್ನರಾಜ ಹಟ್ಟಿಹೊಳಿ, ಮೇಯರ್ ಶೋಭಾ ಸೋಮನಾಚೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಉಪಸ್ಥಿತರಿದ್ದರು.

ಹಿಂದಿನ ಲೇಖನದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇದ್ದರೆ, ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ…
ಮುಂದಿನ ಲೇಖನನಿರೀಕ್ಷೆ ಮೂಡಿಸಿದ ನಾನಿ ಅಭಿನಯದ ಸಿನಿಮಾ ‘ದಸರಾ’