ಮಂಡ್ಯ(Mandya): ಜಿಲ್ಲೆಯ ಜನರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಶುಭಗಳಿಗೆ ಕೂಡಿ ಬಂದಿದ್ದು, ಗುರುವಾರ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ಮತ್ತು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಜಂಟಿಯಾಗಿ ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಧಿಕೃತ ಚಾಲನೆ ನೀಡಿದರು.
ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೈ ಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ಸರ್ಕಾರ ನಿರ್ಧರಿಸಿತ್ತು. ಅದರಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲಾಗುತ್ತಿದ್ದು, ಮೊದಲ ಹೆಜ್ಜೆಯಾಗಿ ಇಂದು ಬಾಯ್ಲರ್ಗೆ ಅಗ್ನಿಸ್ಪರ್ಶ ಮಾಡಲಾಗಿದೆ ಎಂದು ಸಚಿವ ಕೆ.ಗೋಪಾಲಯ್ಯ ಈ ಸಂದರ್ಭದಲ್ಲಿ ತಿಳಿಸಿದರು.
ಮಂಡ್ಯ ಜನರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆ ತುಕ್ಕುಹಿಡಿಯುವ ಹಂತಕ್ಕೆ ತಲುಪಿತ್ತು. ಹಿಂದಿನ ಸರ್ಕಾರಗಳು ಇದರ ಪುನಶ್ಚೇತನಕ್ಕೆ ಮನಸ್ಸು ಮಾಡಿರಲಿಲ್ಲ. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಭಾಗದ ಜನರ ಕನಸುಗಳಿಗೆ, ಭಾವನೆಗಳಿಗೆ ಸ್ಪಂದಿಸಿ ಮೈಶುಗರ್ ಕಾರ್ಖಾನೆಗೆ ಕಾಯಕಲ್ಪ ನೀಡಲಾಗಿದೆ. ಎಲ್ಲರ ಸಹಕಾರದಿಂದ ಇಂದು ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡಲಾಗಿದೆ ಎಂದರು.
ಶೀಘ್ರದಲ್ಲೇ ಕಬ್ಬು ಅರೆಯಲು ಪ್ರಾರಂಭಿಸಿ, ರೈತರಿಗೆ ಅನುವು ಮಾಡಿಕೊಡುತ್ತೇವೆ. ಫ್ಯಾಕ್ಟರಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಚಿವ ಕೆ.ಗೋಪಾಲಯ್ಯ ಅವರು ಹೇಳಿದರು.
ಸಂಸದೆ ಸುಮಲತಾ, ಶಾಸಕ ಶ್ರೀನಿವಾಸ್, ಮಾಜಿ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಮೈಷುಗರ್ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಎಸ್ ಅಶ್ವಥಿ, ಎಸ್ ಪಿ ಯತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.