ಮನೆ ಅಪರಾಧ ಸುಳ್ಯ: ತಲ್ವಾರ್ ಹಿಡಿದು ಓಡಾಡಿದ ಯುವಕನ ಬಂಧನ

ಸುಳ್ಯ: ತಲ್ವಾರ್ ಹಿಡಿದು ಓಡಾಡಿದ ಯುವಕನ ಬಂಧನ

0

ಸುಳ್ಯ(ದಕ್ಷಿಣ ಕನ್ನಡ): ತಾಲ್ಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡುತ್ತಿದ್ದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸಂದೀಪ್ ಎಂಬ ಯುವಕ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಸುಳ್ಯ ಪೊಲೀಸರು ಸಂದೀಪ್ ನನ್ನು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.

ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಕಳೆದ 8 ತಿಂಗಳಿನಿಂದ ಮದ್ಯಪಾನ ಸೇವನೆ ನಿಲ್ಲಿಸಿದ್ದು, ನಿನ್ನೆಯ ದಿನ ಮದ್ಯಪಾನ ವಾಪಾಸು ಆರಂಭಿಸಿದ ಹಿನ್ನೆಲೆಯಲ್ಲಿ ಮಾನಸಿಕ ಸ್ಥಿರತೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.

ಜನರು ಯಾವುದೇ ಭಯಭೀತರಾಗುವುದು ಬೇಡ ಎಂದು ಸುಳ್ಯ ಪೊಲೀಸ್ ತಿಳಿಸಿದ್ದಾರೆ.

ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿದ್ದಾರೆ.

ಹಿಂದಿನ ಲೇಖನಪ್ರಿಯಕರನೊಂದಿಗೆ ಪರಾರಿಯಾಗಿದ್ದ ನವವಧು ಆತ್ಮಹತ್ಯೆ
ಮುಂದಿನ ಲೇಖನಸಿಎಂ ರೇಸ್ ನಲ್ಲಿ ನಾನಿಲ್ಲ: ಸಚಿವ ಎಸ್‌.ಟಿ ಸೋಮಶೇಖರ್