ಮನೆ ರಾಜ್ಯ ಬಿಜೆಪಿ ಟಿಕೆಟ್​ ಸಿಗದಿದ್ದರೂ ಮಂಡ್ಯದಲ್ಲೇ ಸುಮಲತಾ ಸ್ಪರ್ಧೆ:ಹನಕೆರೆ ಶಶಿಕುಮಾರ್

ಬಿಜೆಪಿ ಟಿಕೆಟ್​ ಸಿಗದಿದ್ದರೂ ಮಂಡ್ಯದಲ್ಲೇ ಸುಮಲತಾ ಸ್ಪರ್ಧೆ:ಹನಕೆರೆ ಶಶಿಕುಮಾರ್

0

ಮಂಡ್ಯ:ಬಿಜೆಪಿ ಟಿಕೆಟ್ ಸಿಗದಿದ್ದರೂ ಮಂಡ್ಯದಲ್ಲೇ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎಂದು ಸಂಸದೆ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ.

ಸುಮಲತಾ ಮಂಡ್ಯ ಕಣದಲ್ಲಿ ಇರಲಿದ್ದಾರೆ.ಭಾನುವಾರ ಸಂಜೆ 4 ಗಂಟೆಗೆ ಜೆಪಿ ನಗರ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆದಿದ್ದೇವೆ.ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಸಭೆ ಆಯೋಜನೆ ಮಾಡಲಾಗಿದೆ. ಚುನಾವಣೆಯಲ್ಲಿ ಸುಮಲತಾ ಯಾವ ನಿರ್ಧಾರ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಸುದ್ದಿಗಾರರೊಂದಿಗೆ ತಿಳಿಸಿದರು.
ಈಗಾಗಲೇ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಸುಮಲತಾ ಭೇಟಿ ಮಾಡಿದ್ದಾರೆ.ಟಿಕೆಟ್ ನಮಗೆ ಸಿಗುವ ಭರವಸೆ ಇದೆ.ಇನ್ನು ಟಿಕೆಟ್ ಘೋಷಣೆ ಆಗಿಲ್ಲದೆ ಇರುವುದರಿಂದ ಪ್ಲಾನ್ ಬಿ ಬಗ್ಗೆ ಆಲೋಚನೆ ಮಾಡಿಲ್ಲ.ಮಂಡ್ಯದಿಂದ ಸುಮಲತಾ ಅಂಬರೀಶ್ ಅವರ ಸ್ಪರ್ಧೆ ಖಂಡಿತವಾಗಿ ಇರಲಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ
ಮುಂದಿನ ಲೇಖನಕುಪೇಂದ್ರ ರೆಡ್ಡಿ ಕಡೆಯವರು ಮತ ಕೇಳಿದ್ದಾರೆ,ಆಮಿಷವೊಡ್ಡಿಲ್ಲ: ದರ್ಶನ್ ಪುಟ್ಟಣ್ಣಯ್ಯ