ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ.10, 2024 ರವರೆಗೆ ಇವರು ಅಧಿಕಾರ ಹೊಂದಿರುತ್ತಾರೆ.
ಮಂಗಳವಾರ ಕಚೇರಿಯಿಂದ ನಿವೃತ್ತರಾದ ಮಾಜಿ ಸಿಜೆಐ ಯುಯು ಲಲಿತ್ ಅವರಿಂದ ನ್ಯಾಯಮೂರ್ತಿ ಚಂದ್ರಚೂಡ್ ಅಧಿಕಾರ ವಹಿಸಿಕೊಂಡರು.
ನವೆಂಬರ್ 11, 1959 ರಂದು ಜನಿಸಿದ ನ್ಯಾ. ಚಂದ್ರಚೂಡ್ 1979ರಲ್ಲಿ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಪದವಿ ಪಡೆದರು. ದೆಹಲಿ ವಿಶ್ವವಿದ್ಯಾಲಯದಿಂದ ಎಲ್ಎಲ್ಬಿ 1982ರಲ್ಲಿ ಪದವಿ ಪೂರ್ಣಗೊಳಿಸಿದ ಅವರು ಎಲ್ಎಲ್ಎಂ ಪದವಿ ಪಡೆದದ್ದು ಇಂಗ್ಲೆಂಡ್ನ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ. ಬಳಿಕ ಅದೇ ವಿವಿಯಿಂದ ಡಾಕ್ಟರ್ ಆಫ್ ಜುರಿಡಿಶಿಯಲ್ ಸೈನ್ಸಸ್ (ಎಸ್’ಜೆಡಿ) ಪದವಿ ಸ್ವೀಕಾರ.
1998ರಿಂದ 2000 ರವರೆಗೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸೇವೆ. 1998 ರಲ್ಲಿ ಬಾಂಬೆ ಹೈಕೋರ್ಟ್ನ ಹಿರಿಯ ನ್ಯಾಯವಾದಿಯಾಗಿ ನೇಮಕ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು, ಮಹಿಳಾ ಜೀತ ಕಾರ್ಮಿಕರ ಹಕ್ಕುಗಳು, ಕೆಲಸದ ಸ್ಥಳದಲ್ಲಿ ಎಚ್ಐವಿ ಪೀಡಿತರ ಹಕ್ಕುಗಳು, ಗುತ್ತಿಗೆ ಕಾರ್ಮಿಕರ ಹಕ್ಕುಗಳು. ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಸಂಬಂಧಿಸಿದಂತೆ ತೀವ್ರ ಕಾನೂನು ಹೋರಾಟದಲ್ಲಿ ಭಾಗಿಯಾಗಿದ್ದರು.
ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಮಾರ್ಚ್ 29, 2000 ರಂದು ನೇಮಕ. ಅಕ್ಟೋಬರ್ 31, 2013 ರಂದು ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ. ಮೇ 13, 2016 ರಂದು ಸುಪ್ರೀಂ ಕೋರ್ಟ್ಗೆ ಪದೋನ್ನತಿ ಹೊಂದಿದ್ದರು.
ಆಳುವವರ ವಿರುದ್ಧ ಭಿನ್ನ ತೀರ್ಪುಗಳು ಸೇರಿದಂತೆ ಹಲವು ಗಮನಾರ್ಹ ತೀರ್ಪುಗಳನ್ನು ಅವರು ನೀಡಿದ್ದಾರೆ. ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ, ʼಆಧಾರ್ ಕಾಯಿದೆಯನ್ನು ಹಣಕಾಸು ಮಸೂದೆಯಾಗಿ ಅಂಗೀಕರಿಸಿದ್ದು ಅಸಾಂವಿಧಾನಿಕʼ ಎಂದು ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ ಏಕೈಕ ನ್ಯಾಯಮೂರ್ತಿ ಅವರಾಗಿದ್ದರು.
ನ್ಯಾ. ಚಂದ್ರಚೂಡ್ ಅಧ್ಯಕ್ಷತೆಯ ಸುಪ್ರೀಂ ಕೋರ್ಟ್ ಇ ಸಮಿತಿ ನ್ಯಾಯಾಲಯ ಕಲಾಪಗಳ ನೇರ ಪ್ರಸಾರಕ್ಕೆ ಮೂಲ ಸೌಕರ್ಯ ಒದಗಿಸುವಲ್ಲಿ, ಅದರಲ್ಲಿಯೂ ಕೋವಿಡ್ ದಾಳಿ ಮಾಡಿದ್ದ ವೇಳೆ ಅದರ ಪ್ರಮುಖ ಪಾತ್ರ ವಹಿಸಿತ್ತು.
ಸಿಜೆಐ ಆಗಿ ಕಾರ್ಯ ನಿರ್ವಹಿಸಿದ ತಂದೆ, ಮಗ:
ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ನ್ಯಾಯಮೂರ್ತಿ ವೈ.ವಿ ಚಂದ್ರಚೂಡ್ ಅವರು ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ ಭಾರತದ 16ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಾಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ತಂದೆ ಮತ್ತು ಮಗ ಸಿಜೆಐ’ ಆಗಿದ್ದಾರೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರು ದೇಶದ ಪ್ರಗತಿಪರ ಮತ್ತು ಉದಾರವಾದಿ ನ್ಯಾಯಾಧೀಶರೆಂದು ಪ್ರಸಿದ್ಧರು. ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಸಂವೇದನಾಶೀಲ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧಂಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.