ಮನೆ ದೇಶ ನ್ಯಾಯಾಧೀಶರ ಮೇಲೆ ಟೀಕಾ ಪ್ರಹಾರ: ಮಾಧ್ಯಮಗಳ ವರದಿಗೆ ಸುಪ್ರೀಂ ಕೋರ್ಟ್‌ ಅಸಮಾಧಾನ

ನ್ಯಾಯಾಧೀಶರ ಮೇಲೆ ಟೀಕಾ ಪ್ರಹಾರ: ಮಾಧ್ಯಮಗಳ ವರದಿಗೆ ಸುಪ್ರೀಂ ಕೋರ್ಟ್‌ ಅಸಮಾಧಾನ

0

ನವದೆಹಲಿ (New Delhi): ನ್ಯಾಯಾಧೀಶರ ಮೇಲೆ ಟೀಕಾ ಪ್ರಹಾರ ಮಾಡಿ ಮಾಧ್ಯಮಗಳು ವರದಿ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ʻನ್ಯಾಯಾಧೀಶರ ಮೇಲೆ ಟೀಕಾ ಪ್ರಹಾರ ಬೇಡ. ನ್ಯಾಯಾಧೀಶರಿಗೂ ಸ್ವಲ್ಪ ಸಮಯ ಕೊಡಿ’ ಎಂದು ಮಾಧ್ಯಮಗಳಿಗೆ ಹೇಳಿದೆ. ದೇಶದಾದ್ಯಂತ ಕ್ರೈಸ್ತ ಸಂಸ್ಥೆಗಳು ಮತ್ತು ಪಾದ್ರಿಗಳ ಮೇಲೆ ಹೆಚ್ಚುತ್ತಿರುವ ದಾಳಿಯ ಸಂಬಂಧ ಸಲ್ಲಿಸಿರುವ ಮನವಿ ಅರ್ಜಿ ವಿಚಾರಣೆ ವಿಳಂಬವಾಗುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾದ ಸುದ್ದಿಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು ʻನ್ಯಾಯಾಧೀಶರರನ್ನು ಗುರಿಯಾಗಿಸಿ ಟೀಕಿಸಲೂ ಒಂದು ಮಿತಿ ಇರುತ್ತದೆ’ ಎಂದು ಹೇಳಿದೆ.

ಅರ್ಜಿ ವಿಚಾರಣೆಗೆ ನ್ಯಾಯಾಧೀಶರು ವಿಳಂಬ ಮಾಡುತ್ತಿದ್ದಾರೆ ಎನ್ನುವ ಸುದ್ದಿಯನ್ನು ಆನ್‌ಲೈನ್‌ನಲ್ಲಿ ನೋಡಿರುವೆ. ನಮಗೂ ಸಮಯ ಕೊಡಿ. ಒಬ್ಬ ನ್ಯಾಯಾಧೀಶರು ಕೋವಿಡ್‌ನಿಂದ ಬಳಲುತ್ತಿದ್ದ ಕಾರಣಕ್ಕೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಲಿಲ್ಲ. ಈಗ ನಾವು ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುತ್ತೇವೆ. ಇಲ್ಲದಿದ್ದರೆ ಇದು ಕೂಡ ಮತ್ತೊಂದು ರೀತಿ ಸುದ್ದಿಯಾಗುತ್ತದೆ ಎಂದು ಪೀಠವು ಹೇಳಿದೆ.

ಅರ್ಜಿದಾರರ ವಕೀಲರು, ವಿಚಾರಣೆ ನಡೆಸುವಂತೆ ಕೋರಿದಾಗ ನ್ಯಾಯಪೀಠ ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿತು. ಅರ್ಜಿದಾರರ ಪರ ಹಿರಿಯ ವಕೀಲ ಕೊಲಿನ್ ಗೊನ್ಸಾಲ್ವೆಸ್ ಅವರು ಜೂನ್‌ನಲ್ಲಿ ರಜೆ ಕಾಲದ ಪೀಠದ ಎದುರು, ‘ದೇಶದಾದ್ಯಂತ ಕ್ರೈಸ್ತ ಸಂಸ್ಥೆಗಳು ಮತ್ತು ಕ್ರೈಸ್ತ ಪಾದ್ರಿಗಳ ಮೇಲೆ ಪ್ರತಿ ತಿಂಗಳು ಸರಾಸರಿ 45 ರಿಂದ 50 ಹಿಂಸಾತ್ಮಕ ದಾಳಿಗಳು ನಡೆಯುತ್ತಿವೆ’ ಎಂದು ವಾದಿಸಿದ್ದರು.

ಹಿಂದಿನ ಲೇಖನಖರ್ಜೂರ, ಹಾಲು ಆರೋಗ್ಯಕ್ಕೆ ಎಷ್ಟು ಸಹಕಾರಿ? ಇಲ್ಲಿದೆ ಮಾಹಿತಿ
ಮುಂದಿನ ಲೇಖನತೆಲುಗಿನಲ್ಲಿ ಬ್ಯುಸಿಯಾದ ನಟಿ ಶ್ರೀಲೀಲಾ