ಮನೆ ರಾಜಕೀಯ ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಬೇಗ ಹೊರಬರುತ್ತಾನೆ: ಮಾಜಿ ಸಚಿವ ಎಚ್.ಡಿ.ರೇವಣ್ಣ

ಸೂರಜ್ ರೇವಣ್ಣ ಮಹಾನ್ ದೈವ ಭಕ್ತ, ಬೇಗ ಹೊರಬರುತ್ತಾನೆ: ಮಾಜಿ ಸಚಿವ ಎಚ್.ಡಿ.ರೇವಣ್ಣ

0

ಮೈಸೂರು: ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಗತಿ. ನಾನು ಸಧ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ‌ ಹೀಗಾಗಿ ನಾನು ಹೋಗಲ್ಲ ಎಂದು ಹೆಚ್. ಡಿ. ರೇವಣ್ಣ ತಿಳಿಸಿದರು.

Join Our Whatsapp Group

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ  ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.

ನಿನ್ನೆ ನನ್ನ ಪತ್ನಿ ಭವಾನಿ ಮಕ್ಕಳ ಭೇಟಿಗೆ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ.

ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡೋಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ.

ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ‌.  ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

ಹಿಂದಿನ ಲೇಖನನೂತನ ಅಪರಾಧಿಕ ಕಾನೂನುಗಳು: ದಾಖಲಾದ 3 ವರ್ಷಗಳಲ್ಲಿ ಪ್ರಕರಣ ಇತ್ಯರ್ಥ- ಗೃಹ ಸಚಿವ ಅಮಿತ್ ಶಾ
ಮುಂದಿನ ಲೇಖನಶ್ರೀ ಹೆಬ್ಬೆಟ್ಟದ ಬಸವೇಶ್ವರಸ್ವಾಮಿ ದೇವಾಲಯ