ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ಸಿನಿಮಾಗಳು ಅದರ ಮೂಲ ಭಾಷೆಯ ಜೊತೆಗೆ ಒಟ್ಟು ಐದು ಬೇರೆ-ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತವೆ. ಆದರೆ ಸೂರ್ಯ ನಟಿಸುತ್ತಿರುವ ಹೊಸ ಸಿನಿಮಾ ಒಂದು ಬರೋಬ್ಬರಿ 38 ಭಾಷೆಗಳಲ್ಲಿ ಒಮ್ಮೆಗೆ ಬಿಡುಗಡೆ ಆಗಲಿದೆ. ಈ ವಿಷಯವನ್ನು ಸ್ವತಃ ಸಿನಿಮಾದ ನಿರ್ಮಾಪಕರು ಬಹಿರಂಗಪಡಿಸಿದ್ದಾರೆ.
ಸೂರ್ಯ ಪ್ರಸ್ತುತ ‘ಕಂಗುವ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವು ಐತಿಹಾಸಿಕ, ಥ್ರಿಲ್ಲರ್, ಮೈಥಾಲಜಿ ಅಂಶಗಳನ್ನು ಹೊಂದಿರುವ ಕತೆಯನ್ನು ಒಳಗೊಂಡ ಸಿನಿಮಾ. ಅದ್ಧೂರಿ ಸೆಟ್ಗಳನ್ನು ಹಾಕಿ ಭಾರಿ ಅದ್ಧೂರಿಯಾಗಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ಕೆಇ ಜ್ಞಾನವೇಲ್ ರಾಜಾ ಬಂಡವಾಳ ಹೂಡಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ ‘ಕಂಗುವ’ ಸಿನಿಮಾದ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆಇ ಜ್ಞಾನವೇಲ್ ರಾಜಾ ‘ನಮ್ಮ ಸಿನಿಮಾ 38 ವಿವಿಧ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ’ ಎಂದಿದ್ದಾರೆ. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೊಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ. ಹಾಗಾಗಿ ವಿಶ್ವದ ಬೇರೆ ಬೇರೆ ಭಾಷೆಗಳಲ್ಲಿ ಡಬ್ ಮಾಡಿಸಿ ಏಕಕಾಲಕ್ಕೆ ಬಿಡುಗಡೆ ಮಾಡುವುದು ಅವರ ಆಲೋಚನೆ.
‘ಕಂಗುವ’ ಸಿನಿಮಾವನ್ನು 3ಡಿ ಹಾಗೂ ಐಮ್ಯಾಕ್ಸ್ ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದ ವೀಕ್ಷಣೆ ಅನುಭವ ಉತ್ಕೃಷ್ಟವಾಗಿರಲಿದೆ ಎಂದು ಸಹ ನಿರ್ಮಾಪಕ ಕೆಇ ಜ್ಞಾನವೇಲ್ ರಾಜಾ ಹೇಳಿದ್ದಾರೆ. ‘ನಮ್ಮ ಸಿನಿಮಾ ತಮಿಳು ಸಿನಿಮಾದ ಎಲ್ಲ ಮಾರುಕಟ್ಟೆ ಗಡಿಗಳನ್ನು ದಾಟಿಕೊಂಡು ಹೋಗಲಿದೆ. ಇಡೀ ವಿಶ್ವಕ್ಕೆ ತಲುಪಲಿದ್ದೇವೆ. ಇದಕ್ಕಾಗಿ ನಾವು ಭಿನ್ನ ಮಾದರಿಯ ಮಾರುಕಟ್ಟೆ ಸ್ಟ್ರಾಟೆಜಿಗಳನ್ನು ಬಳಸಲಿದ್ದೇವೆ’ ಎಂದಿದ್ದಾರೆ.
‘ಕಂಗುವ’ ಸಿನಿಮಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಾಯಕಿಯಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಬಾಬಿ ಡಿಯೋಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆಗೆ ನಟರಾಜ್ ಸುಬ್ರಹ್ಮಣಿಯನ್, ಯೋಗಿ ಬಾಬು, ಜಗಪತಿ ಬಾಬು, ಕೋವೈ ಸರಳ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾವನ್ನು ಶಿವ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡುತ್ತಿರುವುದು ದೇವಿ ಶ್ರೀ ಪ್ರಸಾದ್. ಸಿನಿಮಾವನ್ನು ಸ್ಟುಡಿಯೋ ಗ್ರೀನ್ ಮತ್ತು ಯುವಿ ಕ್ರಿಯೇಶನ್ಸ್ ಒಟ್ಟಿಗೆ ನಿರ್ಮಾಣ ಮಾಡಿದೆ. ಸಿನಿಮಾಕ್ಕೆ ಸುಮಾರು 400 ರಿಂದ 500 ಕೋಟಿ ಬಜೆಟ್ ಸುರಿಯಲಾಗಿದ್ದು 2024ರ ಮಧ್ಯಭಾಗದಲ್ಲಿ ಸಿನಿಮಾ ತೆರೆಗೆ ಬರಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.