ಮನೆ ರಾಜ್ಯ ದಕ್ಷಿಣ ಕನ್ನಡ: ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು

ದಕ್ಷಿಣ ಕನ್ನಡ: ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು

0

ದಕ್ಷಿಣ ಕನ್ನಡ(Dakshina kannada): ಜಿಲ್ಲೆಯ ಬಜ್ಪೆ ಸಮೀಪದ ತಲಕಳ ಧರ್ಮ ಚಾವಡಿಯ ಕಟ್ಟಡದಲ್ಲಿ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ (51) ಮೃತದೇಹವು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಈ ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ. ಎಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿ ಸಂಸ್ಥೆಯನ್ನು ಕಟ್ಟಿ, ಇಲ್ಲಿಯೇ ಇವರು ವಾಸವಾಗಿದ್ದರು.

ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.

ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಸಂಸಾರದಲ್ಲಿ ವಿರಸವಾಗಿ ಸನ್ಯಾಸ ಸ್ವೀಕರಿಸಿದ್ದರು. ಪತ್ನಿ ಹಾಗೂ ಅವರ ತಾಯಿ ಧರ್ಮ ಚಾವಡಿ ಅಣತಿ ದೂರದಲ್ಲಿರುವ ಪೂರ್ವಾಶ್ರಮದ ಮನೆಯಲ್ಲಿ ವಾಸವಿದ್ದರು. ಮಗಳು ವಿದೇಶದಲ್ಲಿದ್ದಾರೆ.

ಧರ್ಮ ಚಾವಡಿ ಪ್ರದೇಶದಲ್ಲಿ ಕೋಟಿಗಟ್ಟಲೆ ಬೆಲೆಯ ಸಂಪತ್ತೂ ಇದೆ.

ಹಿಂದಿನ ಲೇಖನಸೌಹಾರ್ದತೆ, ಸಾಮರಸ್ಯ, ಸಹಬಾಳ್ವೆಗೆ ಭಾರತ ಮಾದರಿ: ರಾಜಾರಾಮ್
ಮುಂದಿನ ಲೇಖನಚಾರಣಪ್ರಿಯರಿಗೆ ಬಲು ಇಷ್ಟ ರಾಮದೇವರ ಬೆಟ್ಟ