ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂರು ಜನ ಉಪಮುಖ್ಯಮಂತ್ರಿ ನೇಮಕ ಮಾಡುವ ಕುರಿತು ಮಾತನಾಡುವುದೇ ನಾನ್ ಸೆನ್ಸ್ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೇಡ್ಡಿ ಹೇಳಿದರು.
ಕೆಕೆಆರ್ಡಿಬಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
ಬದಲಾವಣೆ ವಿಚಾರ ಅನಾವಶ್ಯಕ. ಚಂದ್ರಶೇಖರ ಸ್ವಾಮೀಜಿ ಹೇಳಿರುವುದು ಸರಿಯಲ್ಲ. ಸ್ವಾಮೀಜಿಯಾದವರು ಮುಖ್ಯಮಂತ್ರಿ ಕೊಡಿ ಎಂದು ಹೇಳಲು ಯಾರು ಇವರು ಎಂದು ಪ್ರಶ್ನಿಸಿದರು.
ಇವರೇನು ನಮ್ಮಪಕ್ಷದ ಶಾಸಕಾಂಗದ ನಾಯಕರೇ? ಹೈಕಮಾಂಡಾ? ಇವರು ಸ್ವಾಮೀಜಿ ಅವರು ಧರ್ಮ ಚಿಂತನೆಯಲ್ಲಿ ಇರಬೇಕು ಎಂದರು.
ಇಂತಹ ಹುದ್ದೆಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಸರಿಯಲ್ಲ. ಇದು ಧಾರ್ಮಿಕ ಅಶಿಸ್ತು ತೋರಿಸುತ್ತದೆ. ಸಿಎಂ ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ. ಇನ್ನೂ ನಾಲ್ಕು ವರ್ಷ ಬದಲಾವಣೆ ಮಾಡದಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ. ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ ಎಂದರು.
ಜಾತಿವಾರು ಡಿಸಿಎಂ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಮೂರು ಡಿಸಿಎಂ ಮಾಡಬಹುದು. ಇನ್ನೂ 32 ಜನರಿಗೆ ಮಾಡಬಹುದು. ಸಚಿವರಾದವರು ಎಲ್ಲರೂ ಡಿಸಿಎಂ ಆಗಬಹುದು. ಆ ಸ್ಥಾನದಲ್ಲಿ ಏನು ಪವರ್ ಇಲ್ಲ. ಇದು ವೈಭವೀಕರಣದ ಹುದ್ದೆ ಅಷ್ಟೆ ಕಾನೂನಿನಲ್ಲಿ ಬೆಲೆ ಇಲ್ಲ ಎಂದರು.
ಉಪ ಮುಖ್ಯಮಂತ್ರಿ ಎನ್ನುವುದು ಒಂದು ಬೆಲೆ ಜಾಸ್ತಿ ಬರುತ್ತದೆಂಬ ಕಾರಣಕ್ಕೆ ಕೇಳುತ್ತಿರುವುದು ಅಷ್ಟೆ. ಈ ವಿಚಾರದ ಬಗ್ಗೆ ಚರ್ಚೆ ಮಾಡುವವರು ನಾನ್ ಸೆನ್ಸ್ ಅಷ್ಟೆ ಎಂದರು.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.